ಹಿರಿಯ ಸಾಹಿತಿ ಜಿ.ಎಸ್. ಅಮೂರ 
ರಾಜ್ಯ

ಹಿರಿಯ ಸಾಹಿತಿ ಜಿ.ಎಸ್. ಅಮೂರ ನಿಧನ: ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ. 

ಬೆಂಗಳೂರು: ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ. 

ವಯೋಸಹಜ ಅನಾರೋಗ್ಯದಿಂದಾಗಿ ಬೆಂಗಳೂರಿನಲ್ಲಿ ಇಂದು ನಸುಕಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಜಿ.ಎಸ್. ಆಮೂರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿ, ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ಖ್ಯಾತ ಸಾಹಿತಿ, ವಿಮರ್ಶಕ ಡಾ: ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅಮೂರ ಅವರು , ಆಗಲೇ ‘ಕಾಮಿಡಿಯ ಪರಿಕಲ್ಪನೆ’ ಎಂಬ ಮಹಾಪ್ರಬಂಧ ಬರೆದು ಗೌರವ ಡಾಕ್ಟರೇಟ್ ಪಡೆದಿದ್ದರು. ಕನ್ನಡ ಮತ್ತು ಆಂಗ್ಲ ಭಾಷೆಯ ಮೇಲೆ ಪಾಂಡಿತ್ಯ ಹೊಂದಿದ್ದರು. ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರೆಂದು ಪರಿಗಣಿಸಲ್ಪಟ್ಟಿರುವ ಡಾ: ಅಮೂರ ಅವರು ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದರು. ಇತ್ತೀಚೆಗಷ್ಟೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದು:ಖವನ್ನುಂಟು ಮಾಡಿದೆ ಎಂದು ದುಃಖಿಸಿದ್ದಾರೆ.

ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ’. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಅಭಿಮಾನಿಗಳು ಮತ್ತು ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT