ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ದೆವ್ವ ಬಿಡಿಸುವ ನೆಪದಲ್ಲಿ 2 ವರ್ಷದ ಹೆಣ್ಣು ಮಗುವಿನ ಹತ್ಯೆ

ಭೂತೋಚ್ಛಾಟನೆ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ: ಭೂತೋಚ್ಛಾಟನೆ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ  ಮಗು. ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ ಪೂರ್ಣಿಕಾ ನಿದ್ದೆಯಲ್ಲಿ ಬೆಚ್ಚಿ ಬೀಳುತ್ತಿದ್ದಳು. ಈ ಕಾಯಿಲೆಯ ಬಗ್ಗೆ ಆಸ್ಪತ್ರೆಗೆ ತೋರಿಸಿದ್ದರೂ ಪ್ರಯೋಜನವಾಗಿರಲಿಲ್ಲ.

ಕೊನೆಗೆ ಮೌಢ್ಯದ ಮೊರೆ ಹೋಗಿದ್ದು , ರಾಕೇಶ್ ಎಂಬ ಮಾಂತ್ರಿಕನ ಬಳಿ ಹೋಗಿದ್ದಾರೆ. ಮಗುವನ್ನು ನೋಡಿದ ರಾಕೇಶ್ ಇದು ದೆವ್ವದ ಕಾಟ. ಪೂಜೆ ಮಾಡಬೇಕೆಂದು ಪೂರ್ಣಿಕಾನನ್ನು ಕರೆಸಿಕೊಂಡು ಗ್ರಾಮದ ಹೊರ ವಲಯದಲ್ಲಿ ಪೂಜೆ ಮಾಡುತ್ತಾ ಗಿಡವೊಂದರ ಕಡ್ಡಿಯಿಂದ ಮಗುವಿಗೆ ಮನ ಬಂದಂತೆ ಬಾರಿಸಿದ್ದಾನೆ.

ಮೈ ತುಂಬಾ ಬಾಸುಂಡೆ ಬಿದ್ದ ಪರಿಣಾಮ ನೋವು ಹೆಚ್ಚಾಗಿ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಮಗುವಿನ ಸ್ಥಿತಿ ಕಂಡು ಕಂಗಾಲಾದ ಪೋಷಕರು ಹೊಳಲ್ಕೆರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಗು ಮೃತಪಟ್ಟಿದೆ ಎಂದು ವೈದ್ಯರು  ತಿಳಿಸಿದ್ದಾರೆ. ರಾಕೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT