ಅಪಘಾತಕ್ಕೀಡಾದ ಸ್ಕೂಟರ್ ಮತ್ತು ಟ್ಯಾಂಕರ್ ವಾಹನ 
ರಾಜ್ಯ

ಯಲ್ಲಾಪುರ: ಸ್ಕೂಟರ್- ಟ್ಯಾಂಕರ್ ಡಿಕ್ಕಿ: ತಂದೆ, ಮಗಳ ಸಾವು

ಸ್ಕೂಟರ್, ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಂಗಳವಾರ ಸಂಭವಿಸಿದೆ.

ಕಾರವಾರ: ಸ್ಕೂಟರ್, ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಂಗಳವಾರ ಸಂಭವಿಸಿದೆ.

ವಿನೋದ್ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತ ದುರ್ದೈವಿಗಳು. ಮೃತ ವಿನೋದ್ ಕಿಂದಳಕರ್ ಅವರು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ವಿನೋದ್ ಕಿಂದಳಕರ್, ಮಗಳನ್ನು ಯಲ್ಲಾಪುರದಿಂದ ತಮ್ಮ ಊರಾದ ಅಂಕೋಲಾ ತಾಲೂಕಿನ ಹಾರವಾಡಾಕ್ಕೆ ಬಿಡಲು ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT