ರಹಮಾನ್ 
ರಾಜ್ಯ

ಪವರ್ ಸುದ್ದಿ ವಾಹಿನಿ ಪ್ರಸಾರ ಬಂದ್: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟ ರಹಮಾನ್

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದಕ್ಕೆ ನಿರೂಪಕ ರೆಹಮಾನ್ ಹಾಸನ್ ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದಕ್ಕೆ ನಿರೂಪಕ ರೆಹಮಾನ್ ಹಾಸನ್ ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟಿದ್ದಾರೆ.

ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ರಹಮಾನ್ ಅವರು ಪವರ್ ಟಿವಿ ಮೇಲೆ ಸಿಸಿಬಿ ಪೊಲೀಸರು ರೇಡ್ ಮಾಡಿದ್ದಾರೆ. ಅವರಿಗೆ ಬೇಕಾದ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ. ಚಾನಲ್ ಬಂದ್ ಮಾಡಿದ್ದು ನಮ್ಮ ಫೇಸ್ ಬುಕ್ ಲೈವನ್ನು ಬಂದ್ ಮಾಡಿದ್ದಾರೆ. ಇದರಿಂದ 250ಕ್ಕೂ ಉದ್ಯೋಗಿಗಳ ಕುಟುಂಬ ಬೀದಿಗೆ ಬಂದಿವೆ ಎಂದು ಹೇಳಿದ್ದಾರೆ. 

ಪವರ್ ಟಿವಿ ಮೂಲಕ ಸತ್ಯಕ್ಕಾಗಿ ನಾವು ಧ್ವನಿಯೆತ್ತಿದ್ದೇವೆ. ವಿಜಯೇಂದ್ರ ವಿರುದ್ಧ ಧ್ವನಿಯೆತ್ತುವುದನ್ನು ನಿಲ್ಲಿಸುವುದಿಲ್ಲ. ಇವತ್ತು ನಮ್ಮ ಕುಟುಂಬಗಳನ್ನು ಬೀದಿಗೆ ತಂದಿದ್ದೀರಿ. ನಿಮಗೇನು ಮಾಡಿದ್ದೇವೆ ಎಂದು ರೆಹಮಾನ್ ಕಣ್ಣೀರಿಟ್ಟಿದ್ದಾರೆ.

ಇನ್ನು ಪವರ್ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮುಖ್ಯಮಂತ್ರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಇದೇ ಟಿವಿ ಮಾಲೀಕರ ಮೇಲೆ ಆರೋಪ ಬೇರೆ ವಿಚಾರ. ಈ ಬಗ್ಗೆ ತನಿಖೆ ನಡೆಸುವುದಕ್ಕೆ ಅಭ್ಯಂತರವಿಲ್ಲ. ಆದರೆ, ಒಂದು ಟಿವಿ ವಾಹಿನಿ ಲೈವ್ ಬಂದ್ ಮಾಡುವುರಿಂದ ಅದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪತ್ರಕರ್ತರ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ತಾವು ಈ ಕೂಡಲೇ ಗೃಹ ಸಚಿವರಿಗೆ ನಿರ್ದೇಶನ ನೀಡಿ, ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ, ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಶಿವಾನಂದ ತಗಡೂರು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಪ್ರಾಣ ಬಿಟ್ಟಾಗ ಸಂವೇದನೆಯನ್ನೂ ICU ನಲ್ಲಿಟ್ಟಿದ್ರಾ? ಬಿಜೆಪಿಗೆ ಸಿದ್ದರಾಮಯ್ಯ ತರಾಟೆ!

ಸದನದಲ್ಲಿ 'CM ಕುರ್ಚಿ ಕಿತ್ತಾಟ' ಪ್ರತಿಧ್ವನಿ: ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM ಡಿ.ಕೆ ಶಿವಕುಮಾರ್!

ಚೀನಾ ಸೇನೆಯಲ್ಲಿ ಭ್ರಷ್ಟಾಚಾರ ಕಡಿವಾಣಕ್ಕೆ ಭಾರಿ ಕ್ರಮ; ಪರಮಾಣು ಕ್ಷಿಪಣಿಗಳಲ್ಲಿ ಇಂಧನದ ಬದಲು ನೀರು!

'ವಿಬಿ-ಜಿ ರಾಮ್ ಜಿ' ಕಾನೂನು ವಾಪಸ್ ಪಡೆಯಲು ಮಹಾ ಪಂಚಾಯತ್ ಆಗ್ರಹ! ರಾಷ್ಟ್ರಪತಿಗೆ ಮನವಿ ಪತ್ರ

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ; ಸಂಸತ್ ನಲ್ಲಿ ಕೋಲಾಹಲ; Video

SCROLL FOR NEXT