ಪಿ. ಲಂಕೇಶ್ ಅವರ ಆತ್ಮಕಥೆ ಹುಳಿ ಮಾವಿನ ಮರ 
ರಾಜ್ಯ

ಶೀಘ್ರದಲ್ಲಿ ಇ-ಪುಸ್ತಕಗಳ ರೂಪದಲ್ಲಿ ಪಿ.ಲಂಕೇಶ್ ಬರಹಗಳು ಲಭ್ಯ!

ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಮತ್ತು ನಾಟಕಗಾರ ಪಿ. ಲಂಕೇಶ್ ನಾಡಿನ ಪ್ರಸಿದ್ಧ ಬರಹಗಾರರಲ್ಲಿ ಒಬ್ಬರಾಗಿದ್ದಾರೆ. ಅವರ ಲಿಖಿತ ಕೃತಿಗಳು ಶೀಘ್ರದಲ್ಲೇ ಆಡಿಯೊ ಪುಸ್ತಕಗಳಾಗಿ ಬದಲಾಗಲಿವೆ.

ಬೆಂಗಳೂರು: ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಮತ್ತು ನಾಟಕಗಾರ ಪಿ. ಲಂಕೇಶ್ ನಾಡಿನ ಪ್ರಸಿದ್ಧ ಬರಹಗಾರರಲ್ಲಿ ಒಬ್ಬರಾಗಿದ್ದಾರೆ.

ಪಿ. ಲಂಕೇಶ್ ಅವರ ಲಿಖಿತ ಕೃತಿಗಳು ಶೀಘ್ರದಲ್ಲೇ ಆಡಿಯೊ ಪುಸ್ತಕಗಳಾಗಿ ಬದಲಾಗಲಿವೆ ಎಂಬುದು ಓದುಗರಿಗೆ ಒಳ್ಳೆಯ ಸುದ್ದಿಯಾಗಿದೆ. ಯುವ ಪೀಳಿಗೆಗೆ ತಮ್ಮ ತಂದೆಯ ಕೆಲಸಗಳನ್ನು ತಲುಪಿಸುವ ನಿಟ್ಟಿನಲ್ಲಿ ಪುತ್ರ ಇಂದ್ರಜಿತ್ ಲಂಕೇಶ್ ಪ್ರಯತ್ನ ಮಾಡುತ್ತಿದ್ದಾರೆ.

ತಮ್ಮ ತಂದೆಯ ಕೃತಿಗಳು ಯಾವಾಗಲೂ ಸರ್ವತೋಮುಖವಾಗಿದ್ದು, ಯಾವುದೇ ಪೀಳಿಗೆಗೂ ಪ್ರಸ್ತುತವಾಗಲಿವೆ. ಡಿಜಿಟಲ್ ಮಾದರಿಯಲ್ಲಿ ಅವರ ಬರಹಗಳನ್ನು ಜೀವಂತವಾಗಿ ಇರಿಸುವ ಪ್ರಯತ್ನ ಮಾಡುತ್ತಿರುವುದಾಗಿ ಇತ್ತೀಚಿಗೆ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಮಹತ್ವದ  ಪಾತ್ರ ವಹಿಸಿರುವ ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

ಪಿ. ಲಂಕೇಶ್ ಅವರ ಕಾದಂಬರಿ, ನಾಟಕಗಳು, ಕವಿತೆಗಳು ಸೇರಿದಂತೆ ಸುಮಾರು 20 ಪುಸ್ತಕಗಳನ್ನು ಬರೆದಿದ್ದಾರೆ. ಕಲ್ಲು ಕರಗುವ ಸಮಯ ಮತ್ತಿತರ ಕಥೆಗಳು, ಹುಳಿ ಮಾವಿನ ಮರ, ಸಂಕ್ರಾಂತಿ  ಇವುಗಳಲ್ಲಿ ಹೆಚ್ಚಿನ ಜನಪ್ರಿಯ ಕೃತಿಗಳಾಗಿವೆ. ಈ 20 ಪುಸ್ತಕಗಳ ಪೈಕಿ 10 ಪುಸ್ತಕಗಳು ಈಗಾಗಲೇ ಡಬ್ ಆಗಿರುವುದಾಗಿ ಇಂದ್ರಜಿತ್ ಲಂಕೇಶ್ ಹೇಳುತ್ತಾರೆ.

ಉಳಿದ ಕೃತಿಗಳ ಡಬ್ಬಿಂಗ್ ಗಾಗಿ ಸ್ಯಾಂಡಲ್ ವುಡ್ ನ ಹಿರಿಯ ನಟರೊಂದಿಗೆ ಮಾತುಕತೆ ನಡೆಯುತ್ತಿದೆ. ಆ ಪಾತ್ರಕ್ಕೆ ಹೊಂದಿಕೆಯಾಗುವಂತಹ ಧ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಎಲ್ಲಾ ಆಡಿಯೋ ಬುಕ್ ಗಳು ಮೊಬೈಲ್ ಆ್ಯಪ್ ನಲ್ಲಿ ಉಚಿತವಾಗಿ ದೊರೆಯಲಿವೆ. ಪ್ರತಿಯೊಂದು ಕಥೆಯೂ 10 ನಿಮಿಷಗಳಿಗಿಂತ ಹೆಚ್ಚಿಗೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಲಂಕೇಶ್ ಅವರ ಕೃತಿಗಳು ಹಲವರ ಮೇಲೆ ಪ್ರಭಾವ ಬೀರಿದೆ. ಅವರ ಆತ್ಮಕಥೆ ಹುಳಿಮಾವಿನ ಮರ ಹಾಗೂ 12ನೇ ಶತಮಾನದ ಸಾಮಾಜಿಕ ಹರಿಕಾರ ಕ್ರಾಂತಿಕಾರಿ ಬಸವಣ್ಣ ಅವರ ಕುರಿತಾದ ಸಂಕ್ರಾಂತಿ ಅಚ್ಚುಮೆಚ್ಚಿನ ಕೃತಿಗಳಾಗಿವೆ ಎಂದು ಇಂದ್ರಜಿತ್ ಲಂಕೇಶ್ ಹೇಳುತ್ತಾರೆ.

ಈವರೆಗೂ ಅವರ ಕಲ್ಲು ಕರಗುವ ಸಮಯ, ಸಂಕ್ರಾಂತಿ ಎರಡು ಪುಸ್ತಕಗಳು ಮಾತ್ರ ಇಂಗ್ಲಿಷ್ ನಲ್ಲಿ ಅನುವಾದಗೊಂಡಿವೆ. ಆದಾಗ್ಯೂ, ಅನೇಕ ಕೃತಿಗಳು ತಮಿಳು ಹಾಗೂ ಹಿಂದಿ ಭಾಷೆಗೆ ಅನುವಾದಗೊಂಡಿರುವುದಾಗಿ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT