ಬಾಬರಿ ಮಸೀದಿ 
ರಾಜ್ಯ

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಪ್ರತಿಭಟನೆ, ಎಸ್ ಡಿಪಿಐ ಮುಖಂಡರ ಬಂಧನ

ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ಕೋರ್ಟ್ ತೀರ್ಪು ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ(ಎಸ್‌ಡಿಪಿಐ) ಹಲವು ಮುಖಂಡರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ಕೋರ್ಟ್ ತೀರ್ಪು ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ(ಎಸ್‌ಡಿಪಿಐ) ಹಲವು ಮುಖಂಡರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಇಂದು ಸಿಬಿಐ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಆಶ್ರಫ್ ಮಾಚಾರ್, ಮಂಗಳೂರು ನಗರ ಕಾರ್ಪೋರೇಟರ್ ಮುನೀಬ್ ಬೆಂಗ್ರೆ ಮತ್ತು ಹಲವು ಜಿಲ್ಲಾ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದ್ದನ್ನು ಎಸ್ ಡಿಪಿಐ ಮುಖಂಡರು ಖಂಡಿಸಿದರು. ಅಲ್ಲದೆ ಕೋರ್ಟ್ ತೀರ್ಪಿನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!