ಸಂಗ್ರಹ ಚಿತ್ರ 
ರಾಜ್ಯ

ಟಿವಿ ಚಾನಲ್ ಕಚೇರಿ ಮೇಲೆ ಸಿಸಿಬಿ ದಾಳಿ: ಲೈವ್ ಪ್ರಸಾರ ಸ್ಥಗಿತ!

ಹಿರಿಯ ರಾಜಕಾರಣಿಯ ಕುಟುಂಬ ಸದಸ್ಯರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಕುರಿತು ಕುಟುಕು ಕಾರ್ಯಾಚರಣೆ ನಡೆಸಿದ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಾದೇಶಿಕ ಸುದ್ದಿವಾಹಿನಿಯ ಕಚೇರಿ ಮೇಲೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. 

ಬೆಂಗಳೂರು: ಹಿರಿಯ ರಾಜಕಾರಣಿಯ ಕುಟುಂಬ ಸದಸ್ಯರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಕುರಿತು ಕುಟುಕು ಕಾರ್ಯಾಚರಣೆ ನಡೆಸಿದ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಾದೇಶಿಕ ಸುದ್ದಿವಾಹಿನಿಯ ಕಚೇರಿ ಮೇಲೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. 

ಮೆ. ರಾಮಲಿಂಗಮ್ ಕನ್ಸ್ಟ್ರಕ್ಷನ್ ಕಂಪನಿ ಪ್ರೈವೆಟ್ ಲಿಮಿಟೆಡ್‌ನ ಡೈರೆಕ್ಷರ್ ಚಂದ್ರಕಾಂತ್ ರಾಮಲಿಂಗಮ್ ಎಂಬುವರು ಕೊಟ್ಟಿರುವ ದೂರಿನ ಅನ್ವಯ ಎಸಿಎಂಎಂ ನ್ಯಾಯಾಲಯ ಸರ್ಚ್‌ ವಾರೆಂಟ್ ಕೊಟ್ಟಿದೆ.

ಖಾಸಗಿ ವಾಹಿನಿಯ ಎಂಡಿ ರಾಕೇಶ್ ಶೆಟ್ಟಿ ಎಂಬುವರು ಹಣಕಾಸು ವ್ಯವಹಾರದಲ್ಲಿ ಮೋಸ ಮಾಡಿದ್ದಾರೆಂದು ಆರೋಪಿಸಿ ಚಂದ್ರಕಾಂತ್ ರಾಮಲಿಂಗಂ ಎಂಬುವರು ದೂರು ಕೊಟ್ಟಿದ್ದರು.

ಅದಾದ ಬಳಿಕ ಸಿಸಿಬಿನ ಪೊಲೀಸರು ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ಸಂಪರ್ಕಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಅವರು ಸಿಗದೇ ಇದ್ದಾಗ ನ್ಯಾಯಾಲಯದಿಂದ ಸರ್ಚ್‌ ವಾರೆಂಟ್ ಪಡೆದು ಮತ್ತಿಕೆರೆ ರಸ್ತೆಯಲ್ಲಿರುವ ಪವರ್ ಟಿವಿ ಸುದ್ದಿ ವಾಹಿನಿಯ ಕಚೇರಿಯಲ್ಲಿ ತಪಾಸಣೆ ನಡೆಸಿದ್ದರು.

ಬಿಡಿಎದಿಂದ ನಮ್ಮ ಕಂಪನಿಗೆ ಬರಬೇಕಾಗಿದ್ದ 140 ಕೋಟಿ ರೂ. ಹಣದ ಬಗ್ಗೆ ತಿಳಿದುಕೊಂಡು, ಆ ಹಣವನ್ನು ಬಿಡುಗಡೆ ಮಾಡಿಸುತ್ತೇನೆಂದು ಹೇಳಿ ನಂಬಿಸಿದ್ದಾರೆ. ಜೊತೆಗೆ ಬಿಡಿಎದಿಂದ ನಮ್ಮ ಕಂಪನಿಗೆ ಬಿಡುಗಡೆಯಾಗಿದ್ದ 7.79 ಕೋಟಿ ರೂಪಾಯಿಗಳನ್ನು ನಾನೇ ಬಿಡುಗಡೆ ಮಾಡಿಸಿದ್ದೇನೆಂದು ಕಮಿಷನ್ ಕೊಡುವಂತೆ ಬಲವಂತ ಮಾಡಿದ್ದಾರೆ. ನಮ್ಮ ಹಣ ಕೊಡದಿದ್ದರೆ ನಮ್ಮ ಕಂಪನಿಯ ಹೆಸರನ್ನು ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದರು. 

ಹೀಗಾಗಿ ರಾಕೇಶ್ ಶೆಟ್ಟಿ ಅವರಿಗೆ ಕಳೆದ ಸೆ. 22 ರಂದು 25 ಲಕ್ಷ ರೂ. ಹಣವನ್ನು ಕೊಟ್ಟಿದ್ದೇವೆ. ನಂತರವೂ ನಮ್ಮ ಕಂಪನಿಯ ಹೆಸರನ್ನು ಟಿವಿಯಲ್ಲಿ ಬಿತ್ತರಿಸಿ ನಮ್ಮ ಕಂಪನಿಯು ಕೆಲವು ರಾಜಕೀಯ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಬಲವಂತವಾಗಿ ನನ್ನಿಂದ ಹೇಳಿಸಿ, ಅದನ್ನು ರೆಕಾರ್ಡ್‌ ಮಾಡಿಕೊಂಡು ಅದನ್ನು ಪ್ರಸಾರ ಮಾಡಿ ತಮ್ಮ ಚಾನಲ್‌ನ ಟಿಆರ್‌ಪಿಯನ್ನು ಹೆಚ್ಚಿಸಿಕೊಂಡಿದ್ದಾರೆ. 

ಹೀಗಾಗಿ ನನ್ನಿಂದ ಬಲವಂತವಾಗಿ ಹಣವನ್ನು ಕಿತ್ತುಕೊಂಡು ಮೋಸ ಮಾಡಿರುವ ರಾಕೇಶ್ ಶೆಟ್ಟಿ ಹಾಗೂ ಇತರರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಮೆ. ರಾಮಲಿಂಗಂ ಕನ್ಸ್ಟ್ರಕ್ಟನ್ ಕಂಪನಿಯ ನಿರ್ದೇಶಕ ಚಂದ್ರಕಾಂತ್ ರಾಮಲಿಂಗಂ ಅವರು ದೂರು ಸಲ್ಲಿಸಿದ್ದರು.

ಈ ಸಂಬಂಧ ಕೆಪಿ ಅಗ್ರಹಾರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣವನ್ನು ಸಿಸಿಬಿ ತನಿಖೆಗೆ ನೀಡಿದ್ದಾರೆ. 

ಪ್ರಕರಣ ಸಂಬಂಧ ಇದೀಗ ಪೊಲೀಸರು ರಾಕೇಶ್ ಶೆಟ್ಟಿ ಹಾಗೂ ವಾಹಿನಿ ನಿರೂಪಕರೊಬ್ಬರನನ್ನು ವಿಚಾರಣೆ ನಡೆಸಿದ್ದಾರೆ. 

ವಶಪಡಿಸಿಕೊಂಡ ವಸ್ತುಗಳನ್ನು ತಪಾಸಣೆ ನಡೆಸಲು ಸೈಬರ್ ಫೊರೆನ್ಸಿಕ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT