ಕಲಬುರಗಿಯಲ್ಲಿ ಇಂದು ಬೆಳಗ್ಗೆ ಕಂಡುಬಂದ ದೃಶ್ಯ 
ರಾಜ್ಯ

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ನೊಟೀಸ್ ಗೆ ಕ್ಯಾರೇ ಎನ್ನದ ಸಿಬ್ಬಂದಿ, ಪ್ರಯಾಣಿಕರ ಪರದಾಟ

ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು,  ಪ್ರಯಾಣಕ್ಕೆ ಬಸ್ಸನ್ನೇ ನಂಬಿಕೊಂಡಿರುವ ಜನಸಾಮಾನ್ಯರ ಮೇಲೆ ಮುಷ್ಕರದ ಬಿಸಿ ತೀವ್ರವಾಗಿ ತಟ್ಟಿದೆ.

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಯಾಣಕ್ಕೆ ಬಸ್ಸನ್ನೇ ನಂಬಿಕೊಂಡಿರುವ ಜನಸಾಮಾನ್ಯರ ಮೇಲೆ ಮುಷ್ಕರದ ಬಿಸಿ ತೀವ್ರವಾಗಿ ತಟ್ಟಿದೆ.

ಇಂದು ಕೂಡ ಸಾರಿಗೆ ಇಲಾಖೆ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಬಿಗಿಪಟ್ಟು ಹಿಡಿದು ಕುಳಿತಿದ್ದಾರೆ. ಈ ಮಧ್ಯೆ ಸಾರಿಗೆ ಇಲಾಖೆ ಅಧಿಕಾರಿಗಳು ಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ನೊಟೀಸ್ ನೀಡಿದ್ದು, ಸಿಬ್ಬಂದಿ ಅದಕ್ಕೆ ಕ್ಯಾರೇ ಅಂದಿಲ್ಲ ಎಂದು ತಿಳಿದುಬಂದಿದೆ.

ಅನಿವಾರ್ಯವಾಗಿ ಪ್ರಯಾಣಿಸಬೇಕಾದ ಜನರು ದುಪ್ಪಟ್ಟು ಹಣ ಕೊಟ್ಟು, ಬೆಂಗಳೂರಿನಂತಹ ಸಿಟಿಗಳಲ್ಲಿ ಆಟೋ ಚಾಲಕರು ಕೇಳಿದ ದರವನ್ನು ನೀಡಿ ಪ್ರಯಾಣಿಸಬೇಕಾದ ಪರಿಸ್ಥಿತಿ.

ಸಾಲು, ಸಾಲು ರಜೆ, ಪ್ರಯಾಣಿಕರಿಗೆ ಸಂಕಷ್ಟ, ಖಾಸಗಿ ಬಸ್ಸುಗಳಿಗೆ ಹಬ್ಬ: ನಾಳೆ ವಾರಾಂತ್ಯ, ನಾಡಿದ್ದು ಸೋಮವಾರ ಒಂದು ದಿನ ರಜೆ ಹಾಕಿದರೆ, ಮಂಗಳವಾರ ಯುಗಾದಿ ಹಬ್ಬ ಇರುವುದರಿಂದ ನಾಲ್ಕು ದಿನ ರಜೆಯೆಂದು ಊರಿಗೆ ಹೋಗಬೇಕೆಂದವರು ಖಾಸಗಿ ಬಸ್ಸನ್ನೇ ನಂಬಿಕೊಳ್ಳಬೇಕಾಗಿದೆ, ಇಲ್ಲವೇ ರೈಲುಗಳಲ್ಲಿ ಊರಿಗೆ ಹೋಗುವವರು ಹೆಚ್ಚಾಗಿರುವುದರಿಂದ ರೈಲುಗಳಲ್ಲಿ ದಟ್ಟಣೆ ತೀವ್ರವಾಗಿರಬಹುದು.

ಬಸ್ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಬಸ್ಸುಗಳು ಕೇಳಿದಷ್ಟು ಹಣ ನೀಡಿ ಊರಿಗೆ ಹೋಗಬೇಕಾದ ಅನಿವಾರ್ಯ ಪ್ರಯಾಣಿಕರದ್ದು. ಬಸ್ ಮುಷ್ಕರ ಹಿನ್ನೆಲೆ ಕಳೆದ ಎರಡು ದಿನಗಳಿಂದ ಉತ್ತರ ಕರ್ನಾಟಕ ಭಾಗಕ್ಕೆ ಖಾಸಗಿ ಬಸ್ ಗಳು ಅಷ್ಟೊಂದು ಕಂಡುಬಂದಿಲ್ಲ. ಹುಬ್ಬಳ್ಳಿ, ರಾಯಚೂರು, ಕಲಬುರ್ಗಿ, ಬೀದರ್, ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿದಂತೆ ಇತರೆ ಭಾಗಕ್ಕೆ ಬಸ್ ಸಮಸ್ಯೆ ಇದ್ದು, ಹಬ್ಬದ ಕಾರಣ ಊರಿಗೆ ಹೋಗುವ ಜನರಿಗೆ ಸಮಸ್ಯೆ ಕಾಡಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT