ಕಲಬುರಗಿಯಲ್ಲಿ ಇಂದು ಬೆಳಗ್ಗೆ ಕಂಡುಬಂದ ದೃಶ್ಯ 
ರಾಜ್ಯ

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ನೊಟೀಸ್ ಗೆ ಕ್ಯಾರೇ ಎನ್ನದ ಸಿಬ್ಬಂದಿ, ಪ್ರಯಾಣಿಕರ ಪರದಾಟ

ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು,  ಪ್ರಯಾಣಕ್ಕೆ ಬಸ್ಸನ್ನೇ ನಂಬಿಕೊಂಡಿರುವ ಜನಸಾಮಾನ್ಯರ ಮೇಲೆ ಮುಷ್ಕರದ ಬಿಸಿ ತೀವ್ರವಾಗಿ ತಟ್ಟಿದೆ.

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಯಾಣಕ್ಕೆ ಬಸ್ಸನ್ನೇ ನಂಬಿಕೊಂಡಿರುವ ಜನಸಾಮಾನ್ಯರ ಮೇಲೆ ಮುಷ್ಕರದ ಬಿಸಿ ತೀವ್ರವಾಗಿ ತಟ್ಟಿದೆ.

ಇಂದು ಕೂಡ ಸಾರಿಗೆ ಇಲಾಖೆ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಬಿಗಿಪಟ್ಟು ಹಿಡಿದು ಕುಳಿತಿದ್ದಾರೆ. ಈ ಮಧ್ಯೆ ಸಾರಿಗೆ ಇಲಾಖೆ ಅಧಿಕಾರಿಗಳು ಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ನೊಟೀಸ್ ನೀಡಿದ್ದು, ಸಿಬ್ಬಂದಿ ಅದಕ್ಕೆ ಕ್ಯಾರೇ ಅಂದಿಲ್ಲ ಎಂದು ತಿಳಿದುಬಂದಿದೆ.

ಅನಿವಾರ್ಯವಾಗಿ ಪ್ರಯಾಣಿಸಬೇಕಾದ ಜನರು ದುಪ್ಪಟ್ಟು ಹಣ ಕೊಟ್ಟು, ಬೆಂಗಳೂರಿನಂತಹ ಸಿಟಿಗಳಲ್ಲಿ ಆಟೋ ಚಾಲಕರು ಕೇಳಿದ ದರವನ್ನು ನೀಡಿ ಪ್ರಯಾಣಿಸಬೇಕಾದ ಪರಿಸ್ಥಿತಿ.

ಸಾಲು, ಸಾಲು ರಜೆ, ಪ್ರಯಾಣಿಕರಿಗೆ ಸಂಕಷ್ಟ, ಖಾಸಗಿ ಬಸ್ಸುಗಳಿಗೆ ಹಬ್ಬ: ನಾಳೆ ವಾರಾಂತ್ಯ, ನಾಡಿದ್ದು ಸೋಮವಾರ ಒಂದು ದಿನ ರಜೆ ಹಾಕಿದರೆ, ಮಂಗಳವಾರ ಯುಗಾದಿ ಹಬ್ಬ ಇರುವುದರಿಂದ ನಾಲ್ಕು ದಿನ ರಜೆಯೆಂದು ಊರಿಗೆ ಹೋಗಬೇಕೆಂದವರು ಖಾಸಗಿ ಬಸ್ಸನ್ನೇ ನಂಬಿಕೊಳ್ಳಬೇಕಾಗಿದೆ, ಇಲ್ಲವೇ ರೈಲುಗಳಲ್ಲಿ ಊರಿಗೆ ಹೋಗುವವರು ಹೆಚ್ಚಾಗಿರುವುದರಿಂದ ರೈಲುಗಳಲ್ಲಿ ದಟ್ಟಣೆ ತೀವ್ರವಾಗಿರಬಹುದು.

ಬಸ್ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಬಸ್ಸುಗಳು ಕೇಳಿದಷ್ಟು ಹಣ ನೀಡಿ ಊರಿಗೆ ಹೋಗಬೇಕಾದ ಅನಿವಾರ್ಯ ಪ್ರಯಾಣಿಕರದ್ದು. ಬಸ್ ಮುಷ್ಕರ ಹಿನ್ನೆಲೆ ಕಳೆದ ಎರಡು ದಿನಗಳಿಂದ ಉತ್ತರ ಕರ್ನಾಟಕ ಭಾಗಕ್ಕೆ ಖಾಸಗಿ ಬಸ್ ಗಳು ಅಷ್ಟೊಂದು ಕಂಡುಬಂದಿಲ್ಲ. ಹುಬ್ಬಳ್ಳಿ, ರಾಯಚೂರು, ಕಲಬುರ್ಗಿ, ಬೀದರ್, ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿದಂತೆ ಇತರೆ ಭಾಗಕ್ಕೆ ಬಸ್ ಸಮಸ್ಯೆ ಇದ್ದು, ಹಬ್ಬದ ಕಾರಣ ಊರಿಗೆ ಹೋಗುವ ಜನರಿಗೆ ಸಮಸ್ಯೆ ಕಾಡಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT