ಸಾಂದರ್ಭಿಕ ಚಿತ್ರ 
ರಾಜ್ಯ

ಸಾರಿಗೆ ಸಚಿವರ ತವರು ಜಿಲ್ಲೆಯಲ್ಲೇ ಇಲಾಖೆ ನೌಕರ ಆತ್ಮಹತ್ಯೆ: ಅಧಿಕಾರಿಗಳಿಂದ ಕಿರುಕುಳ ಆರೋಪ 

ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನೆ ತೀವ್ರವಾಗಿದೆ.

ಬೆಳಗಾವಿ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನೆ ತೀವ್ರವಾಗಿದೆ.

ಹಲವು ಕಡೆಗಳಲ್ಲಿ ನೌಕರರು ತಮ್ಮ ಸಂಕಷ್ಟ, ಆಕ್ರೋಶಗಳನ್ನು ಹೊರಹಾಕುತ್ತಿದ್ದಾರೆ. ಡ್ಯೂಟಿಗೆ ಹಾಜರಾಗದ ಸಿಬ್ಬಂದಿ ವಿರುದ್ಧ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ, ವಸತಿ ಗೃಹಗಳನ್ನು ಬಿಡಲು ಹೇಳುತ್ತಿದ್ದಾರೆ ಎಂಬ ವರದಿಗಳು ಬರುತ್ತಿವೆ.

ಈ ಮಧ್ಯೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಶಿವಕುಮಾರ್ ನೀಲಗಾರ(40 ವರ್ಷ) ಎಂಬ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸವದತ್ತಿ ಪಟ್ಟಣದಲ್ಲಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರು ಸವದತ್ತಿ ಸಾರಿಗೆ ಇಲಾಖೆ ಘಟಕದಲ್ಲಿ ಚಾಲಕ ಕಂ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT