ಸಂಗ್ರಹ ಚಿತ್ರ 
ರಾಜ್ಯ

ಸರ್ಕಾರಿ ಕಾಲೇಜುಗಳಿಗೆ ಕಂಪ್ಯೂಟರ್ ಸರಬರಾಜು ಆರಂಭ

ಉನ್ನತ ಶಿಕ್ಷಣ ಇಲಾಖೆಯ ಹೆಲ್ಪ್ ಎಜುಕೇಟ್ ಉಪಕ್ರಮದಡಿ ಕಾಗ್ನಿಜೆಂಟ್ ಸಂಸ್ಥೆ ನೀಡಿರುವ ಡಿ ಬಾಂಡೆಡ್ ಕಂಪ್ಯೂಟರ್‍ಗಳನ್ನು ವಿವಿಧ ಕಾಲೇಜುಗಳಿಗೆ ಹೊತ್ತು ಸಾಗುವ ವಾಹನಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಅವರು ಶುಕ್ರವಾರ ಚಾಲನೆ ನೀಡಿದರು. 

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ಹೆಲ್ಪ್ ಎಜುಕೇಟ್ ಉಪಕ್ರಮದಡಿ ಕಾಗ್ನಿಜೆಂಟ್ ಸಂಸ್ಥೆ ನೀಡಿರುವ ಡಿ ಬಾಂಡೆಡ್ ಕಂಪ್ಯೂಟರ್‍ಗಳನ್ನು ವಿವಿಧ ಕಾಲೇಜುಗಳಿಗೆ ಹೊತ್ತು ಸಾಗುವ ವಾಹನಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಅವರು ಶುಕ್ರವಾರ ಚಾಲನೆ ನೀಡಿದರು. 

ವಿವಿಧ ಹಂತಗಳಲ್ಲಿ 12,500 ಡಿ ಬಾಂಡೆಡ್ ಕಂಪ್ಯೂಟರ್‍ಗಳನ್ನು ಬೆಂಗಳೂರು ವಲಯದ ವಿವಿಧ ಕಾಲೇಜುಗಳಿಗೆ ಹಂಚಿಕೆ ಮಾಡಲಾಗುತ್ತದೆ.

ಈ ವೇಳೆ ಮಾತನಾಡಿದ ಪ್ರದೀಪ್ ಅವರು, ಕಾಗ್ನಿಜೆಂಟ್ ಸಂಸ್ಥೆ ನೀಡಿರುವ ಕಂಪ್ಯೂಟರ್‍ಗಳಿಗೆ ಅಗತ್ಯ ಸಾಫ್ಟ್'ವೇರ್‍ಅನ್ನು ರೋಟರಿ ಕ್ಲಬ್ ಅಪ್‍ಡೇಟ್ ಮಾಡಿಕೊಡುತ್ತಿದೆ. ಈ ಕಂಪ್ಯೂಟರ್‍ಗಳನ್ನು ಸರ್ಕಾರಿ ಪದವಿ ಕಾಲೇಜು, ಎಂಜಿನಿಯರಿಂಗ್ ಪದವಿ ಕಾಲೇಜು, ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ಹೇಳಿದ್ದಾರೆ. 

ಎಲ್ಲ ಸರ್ಕಾರಿ ಪದವಿ ಎಂಜಿನಿಯರಿಂಗ್ ತಾಂತ್ರಿಕ ಕಾಲೇಜುಗಳಿಗೆ 30 ಸಾವಿರ ಕಂಪ್ಯೂಟರ್‍ಗಳು ಬೇಕಾಗಿದ್ದು, ಕಾಗ್ನಿಜೆಂಟ್ ಕಂಪೆನಿ 12,500 ಕಂಪ್ಯೂಟರ್ ನೀಡಿದ್ದು, ಮತ್ತೆ 8 ಸಾವಿರ ಕಂಪ್ಯೂಟರ್‍ಗಳನ್ನು ನೀಡುವುದಾಗಿ ಭರವಸೆ ನೀಡಿದರು.

ಉಳಿದ 10 ಸಾವಿರ ಕಂಪ್ಯೂಟರ್‍ಗಳನ್ನು ಬೇರೆ ಬೇರೆ ಕಂಪೆನಿಗಳಿಂದ ಪಡೆಯಲಾಗುವುದು. ಅಧ್ಯಾಪಕರಿಗೆ ತರಬೇತಿ ನೀಡುವುದು, ವಿದ್ಯಾರ್ಥಿಗಳಿಗೆ ನೆರವಾಗುವ ಹಾಗೂ ಕಾಲೇಜುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಎಲ್ ಎಜುಕೇಟ್ ಹೆಸರಿನಲ್ಲಿ ಈ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ಟಾಸ್ಕ್‍ಪೋರ್ಸ್ ರಚಿಸಲಾಗಿದ್ದು, ಕಂಪೆನಿಗಳನ್ನು ಸಂಪರ್ಕಿಸಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಕಾಲೇಜಿಗೆ ನೆರವು ನೀಡುವಂತೆ ಕೋರಲಾಗುವುದು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!