ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 
ರಾಜ್ಯ

ಸರ್ಕಾರಿ ರಜೆ ದಿನಗಳಲ್ಲೂ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಿ: ಚು.ಆಯೋಗಕ್ಕೆ ಡಿಕೆಶಿ ಪತ್ರ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರಿ ರಜೆ ದಿನಗಳಲ್ಲೂ ನಾಮಪತ್ರ ಸಲ್ಲಿಸಲು ಅವಕಾಶ ನೀಡಿ ಎಂದು ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರಿ ರಜೆ ದಿನಗಳಲ್ಲೂ ನಾಮಪತ್ರ ಸಲ್ಲಿಸಲು ಅವಕಾಶ ನೀಡಿ ಎಂದು ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ. 

ರಜಾ ದಿನವಾದ ಏ.13 ಮತ್ತು 14 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಡಿ.ಕೆ.ಶಿವಕುಮಾರ್‌ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ, ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳ 266 ವಾರ್ಡ್‌ಗಳಿಗೆ ನಿಗದಿಯಾಗಿರುವ ಚುನಾವಣೆಗೆ ಏ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಸಲ್ಲಿಕೆಗೆ 8 ದಿನ ಕಾಲಾವಕಾಶ ಇದ್ದರೂ ಅದರಲ್ಲಿ 4 ದಿನ ಸಾರ್ವತ್ರಿಕ ರಜಾ ದಿನ ಇರುತ್ತದೆ. ಹೀಗಾಗಿ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಳಿಗೆ ನಾಮಪತ್ರ ಸಲ್ಲಿಸಲು ಸಾಕಷ್ಟು ಕಾಲಾವಕಾಶ ದೊರೆಯುವುದಿಲ್ಲ ಎಂದು ಹೇಳಿದ್ದಾರೆ.

ಈ ವಿಚಾರ ಸೂಕ್ಷ್ಮವಾಗಿದ್ದು ಏ.13 ಮತ್ತು 14 ರಂದು ಸಹ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ. 1 ಮಹಾನಗರ ಪಾಲಿಕೆ, 5 ನಗರಸಭೆ, 2 ಪುರಸಭೆ, 2 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ