ಸಾಂದರ್ಭಿಕ ಚಿತ್ರ 
ರಾಜ್ಯ

ತಾಪಮಾನ ಏರಿಕೆ: ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದ ಸಮಯದಲ್ಲಿ ಬದಲಾವಣೆ

ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಕಲಬುರಗಿ: ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಭಾಗದ ಸರ್ಕಾರಿ ಕಚೇರಿಗಳು ನಾಳೆಯಿಂದ ಮುಂದಿನ ಎರಡು ತಿಂಗಳು ಬೆಳಗ್ಗೆ 8ರಿಂದ ಮಧ್ಯಾಹ್ನ 1-30ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ.

ಕಲಬುರಗಿ ವಿಭಾಗದ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಏಪ್ರಿಲ್ 1ರಿಂದ ಮೇ 31ರವರೆಗೆ ಈ ಆದೇಶ ಅನ್ವಯವಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತಾತ್ಮಕ ಸುಧಾರಣೆಗಳ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.

ಆದಾಗ್ಯೂ, ಕೋವಿಡ್-19 ಗೆ ಸಂಬಂಧಿಸಿದಂತೆ ತುರ್ತು ಕೆಲಸ ಮಾಡಲು ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ಗಳ ಸಿಇಒಗಳಿಂದ ಸೂಚಿಸಲ್ಪಟ್ಟ ನೌಕರರಿಗೆ ಈ ಬದಲಾವಣೆ ಅನ್ವಯವಾಗುವುದಿಲ್ಲ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ