ಸಾಂದರ್ಭಿಕ ಚಿತ್ರ 
ರಾಜ್ಯ

ತಾಪಮಾನ ಏರಿಕೆ: ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದ ಸಮಯದಲ್ಲಿ ಬದಲಾವಣೆ

ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಕಲಬುರಗಿ: ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಭಾಗದ ಸರ್ಕಾರಿ ಕಚೇರಿಗಳು ನಾಳೆಯಿಂದ ಮುಂದಿನ ಎರಡು ತಿಂಗಳು ಬೆಳಗ್ಗೆ 8ರಿಂದ ಮಧ್ಯಾಹ್ನ 1-30ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ.

ಕಲಬುರಗಿ ವಿಭಾಗದ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಏಪ್ರಿಲ್ 1ರಿಂದ ಮೇ 31ರವರೆಗೆ ಈ ಆದೇಶ ಅನ್ವಯವಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತಾತ್ಮಕ ಸುಧಾರಣೆಗಳ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.

ಆದಾಗ್ಯೂ, ಕೋವಿಡ್-19 ಗೆ ಸಂಬಂಧಿಸಿದಂತೆ ತುರ್ತು ಕೆಲಸ ಮಾಡಲು ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ಗಳ ಸಿಇಒಗಳಿಂದ ಸೂಚಿಸಲ್ಪಟ್ಟ ನೌಕರರಿಗೆ ಈ ಬದಲಾವಣೆ ಅನ್ವಯವಾಗುವುದಿಲ್ಲ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT