ಬಿಸಿಲ ಝಳ, ಕೋವಿಡ್ ಹೆಚ್ಚಳ: ನಗರಕ್ಕೆ ನೀರು ಪೂರೈಕೆಯಲ್ಲಿ ತನ್ನ ದಾಖಲೆಯನ್ನೇ ಮುರಿದ ಬಿಡಬ್ಲ್ಯುಎಸ್ಎಸ್ ಬಿ! 
ರಾಜ್ಯ

ಬಿಸಿಲ ಝಳ, ಕೋವಿಡ್ ಹೆಚ್ಚಳ: ನಗರಕ್ಕೆ ನೀರು ಪೂರೈಕೆಯಲ್ಲಿ ತನ್ನ ದಾಖಲೆಯನ್ನೇ ಮುರಿದ ಜಲಮಂಡಳಿ!

ಬಿಸಿಲಿನ ಝಳ ಹೆಚ್ಚಳವಾಗುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕೋವಿಡ್-19 ಹೆಚ್ಚಳದ ಆತಂಕ ನೀರಿನ ಬೇಡಿಕೆಯನ್ನು ಹಿಂದೆಂದಿನ ಬೇಸಿಗೆಗಳಿಗಿಂತ ಹೆಚ್ಚು ಮಾಡಿದೆ.

ಬೆಂಗಳೂರು: ಬಿಸಿಲಿನ ಝಳ ಹೆಚ್ಚಳವಾಗುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕೋವಿಡ್-19 ಹೆಚ್ಚಳದ ಆತಂಕ ನೀರಿನ ಬೇಡಿಕೆಯನ್ನು ಹಿಂದೆಂದಿನ ಬೇಸಿಗೆಗಳಿಗಿಂತ ಹೆಚ್ಚು ಮಾಡಿದೆ.
 
ಕೋವಿಡ್-19 ಹೆಚ್ಚುತ್ತಿರುವುದರಿಂದ ಪದೇ ಪದೇ ಕೈ ತೊಳೆಯುವುದು, ಹಿಂದೆಂದಿಗಿಂತಲೂ ಹೆಚ್ಚು ಬಾರಿ ಸ್ನಾನ ಮಾಡುವುದು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಡಬ್ಲ್ಯುಎಸ್ಎಸ್ ಬಿ ಕಾವೇರಿ ನೀರನ್ನು ನಗರದ ಜನತೆಗೆ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ನೀರು ಪೂರೈಕೆ ಮಾಡಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನೂ ಮುರಿದಿದೆ. 

ಏ.6 ರಿಂದ ಆರಂಭಗೊಂಡು ಪ್ರತಿದಿನ 1,468 ರಿಂದ 1,475 ಮಿಲಿಯನ್ ಲೀಟರ್ ಗಳಷ್ಟು ನೀರನ್ನು ಬಿಡಬ್ಲ್ಯುಎಸ್ಎಸ್ ಬಿ ಪೂರೈಕೆ ಮಾಡಿದೆ. ಈ ಬಗ್ಗೆ ಜಲಮಂಡಳಿಯ ಮುಖ್ಯ ಇಂಜಿನಿಯರ್, ಕಾವೇರಿ, ಎಸ್ ಬಿ ರಮೇಶ್ ಮಾಹಿತಿ ನೀಡಿದ್ದು, "ಹಿಂದಿನ ವರ್ಷಗಳಿಗಿಂತ ಈ ವರ್ಷ ಬಿಸಿಲ ಝಳ ಹೆಚ್ಚಾಗಿದೆ. ಈ ನಡುವೆ ಕೋವಿಡ್-19 ಸೋಂಕು ಪ್ರಸರಣವೂ ಹೆಚ್ಚುತ್ತಿದ್ದು, ಸೋಂಕು ಬಾರದ ರೀತಿಯಲ್ಲಿ ಎಚ್ಚರ ವಹಿಸುವುದಕ್ಕಾಗಿ ಜನತೆ ಹೆಚ್ಚಿನ ನೀರನ್ನು ಬಳಕೆ ಮಾಡುತ್ತಿದ್ದಾರೆ. ಈ ಕಾರಣದಿಂದ ನೀರಿನ ಬೇಡಿಕೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, 6 ನೇ ಪಂಪ್ ನ್ನು ಕಾರ್ಯಾಚರಣೆಗೆ ಒಳಪಡಿಸಿದ್ದೇವೆ ಎಂದು ತಿಳಿಸಿದ್ದಾರೆ. 

ಕಳೆದ ವಾರದವರೆಗೂ ಬಿಡಬ್ಲ್ಯುಎಸ್ಎಸ್ ಬಿ ತೊರೆಕಾಡನಹಳ್ಳಿ ಜಲಾಶಯದಿಂದ 1,140 ರಿಂದ 1,142 ಎಂಎಲ್ ಡಿ ನೀರನ್ನು ಪೂರೈಕೆ ಮಾಡುತ್ತಿತ್ತು.  ಮೂರು ದಿನಗಳಿಂದ ನೀರು ಪೂರೈಕೆ ಪ್ರಮಾಣವನ್ನು 300 ಎಂಎಲ್ ಡಿ ಯಷ್ಟು ಹೆಚ್ಚಿಸಲಾಗಿದೆ. ಈ ವರೆಗೂ ಪೂರೈಕೆಯಾಗಿರುವ ನೀರಿನ ಗರಿಷ್ಠ ಪ್ರಮಾಣ 1,452 ಎಂಎಲ್ ಡಿ ಆಗಿದೆ ಎಂದು ಎಸ್ ಬಿ ರಮೇಶ್ ಮಾಹಿತಿ ನೀಡಿದ್ದಾರೆ. 

ನೀರಿನ ಪೂರೈಕೆ ಪ್ರಮಾಣವನ್ನು ಹೆಚ್ಚಿಸಿ ನಾವು ದೊಡ್ದ ಸವಾಲು ಹಾಗೂ ಅಪಾಯವನ್ನು ತೆಗೆದುಕೊಂಡಿದ್ದೇವೆ. ಈ ವರೆಗೂ ಕೇವಲ 5 ಪಂಪ್ ಗಳನ್ನು ಮಾತ್ರವೇ ಬಳಕೆ ಮಾಡಲಾಗುತ್ತಿತ್ತು. ಪ್ರಾಯೋಗಿಕವಾಗಿ ಈಗ 16-18 ಗಂಟೆಗಳು ಮಾತ್ರವೇ ಪಂಪ್ ಮಾಡುತ್ತಿದ್ದೇವೆ. ಕೆಲವು ದಿನಗಳ ಬಳಿಕ ದಿನಪೂರ್ತಿ ಪಂಪ್ ಗಳು ಕಾರ್ಯಾಚರಣೆ ಮಾಡಲಿದ್ದು 10-15 ಎಂಎಲ್ ಡಿ ನೀರು ಹೆಚ್ಚು ಸಿಗಲಿದೆ, ಏಪ್ರಿಲ್-ಮೇ ತಿಂಗಳಲ್ಲಿ ನೀರಿನ ಪೂರೈಕೆ ಬೇಡಿಕೆಯನ್ನು ತಲುಪಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್