ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು ದೋಣಿ ದುರಂತ: 3 ಮೀನುಗಾರರ ಮೃತದೇಹ ಪತ್ತೆ, ನಾಪತ್ತೆಯಾದವರಿಗೆ ಮುಂದುವರಿದ ಶೋಧ

ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ ಮೂವರು ಮೀನುಗಾರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಮಂಗಳೂರು: ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ ಮೂವರು ಮೀನುಗಾರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಮೃತಪಟ್ಟವರಲ್ಲಿ ಇಬ್ಬರು ತಮಿಳುನಾಡಿನ ಕೊಲಾಚೆಲ್ ಮೂಲದವರಾಗಿದ್ದರೆ, ಇನ್ನೊಬ್ಬರು ಪಶ್ಚಿಮ ಬಂಗಾಳದವರು. ಶವಗಳನ್ನು ಇಲ್ಲಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದ ಇಬ್ಬರು ಮೀನುಗಾರರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ದೋಣಿಯಲ್ಲಿದ್ದ ತಮಿಳುನಾಡಿನ ಆರು ಮಂದಿ ಮತ್ತು ಬಂಗಾಳದ ಮೂವರು ಮೀನುಗಾರರು ಇನ್ನೂ ಪತ್ತೆಯಾಗಿಲ್ಲ.

ಏಪ್ರಿಲ್ 11 ರಂದು ಕೇರಳದ ಕೋಳಿಕ್ಕೋಡ್ ಜಿಲ್ಲೆಯ ಬೇಪೋರ್‌ನಿಂದ ರಾತ್ರಿ 11 ಗಂಟೆಗೆ ಹೊರಟ ಮೀನುಗಾರಿಕಾ ದೋಣಿ IFB Rabah ದಲ್ಲಿ 14 ಮೀನುಗಾರರು ಇದ್ದರು. ಮಂಗಳೂರು ಕರಾವಳಿಯಿಂದ 43 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮಂಗಳವಾರ ಸುಮಾರು ನಸುಕಿನ ಜಾವ 2.30 ಗಂಟೆಗೆ ಸಿಂಗಾಪುರ ಮೂಲದ MV APL Le Havre ಎನ್ನುವ ಹಡಗಿಗೆ ದೋಣಿ ಡಿಕ್ಕಿ ಹೊಡೆದಿದೆ.

ಕೋಸ್ಟ್ ಗಾರ್ಡ್ ಹಡಗುಗಳಾದ ರಾಜ್‌ದೂತ್, ಅಮರ್ತ್ಯ, C-448 ಮತ್ತು ಡಾರ್ನಿಯರ್ ವಿಮಾನಗಳು ಕಾಣೆಯಾದ ಮೀನುಗಾರರ ಹುಡುಕಾಟವನ್ನು ಮುಂದುವರಿಸಿವೆ. ಇದೇ ವೇಳೆ ನೌಕಾಪಡೆಯ ಸಹಾಯವನ್ನೂ ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT