ಸಚಿವ ಎಸ್.ಸುರೇಶ್ ಕುಮಾರ್ 
ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಚಿಂತನೆ ನಡೆದಿಲ್ಲ: ಸಚಿವ ಸುರೇಶ್ ಕುಮಾರ್

ಸಿಬಿಎಸ್‌ಇನಂತೆ ನಮ್ಮ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಯಾವ ಚಿಂತನೆ ನಡೆದಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಸಿಬಿಎಸ್‌ಇನಂತೆ ನಮ್ಮ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಯಾವ ಚಿಂತನೆ ನಡೆದಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

"ಸಿಬಿಎಸ್‌ಇ ನಿರ್ಧಾರದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ರದ್ದತಿಗೆ ಸಂಬಂಧಿಸಿದಂತೆ ರಾಜ್ಯವು ಏನನ್ನೂ ನಿರ್ಧರಿಸಿಲ್ಲ. ಎಲ್ಲಾ ನಿಯತಾಂಕಗಳನ್ನು ಪರಿಗಣಿಸಿ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು." ಸಚಿವರು ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಸ್ಪಷ್ತನೆ ನೀಡಿರುವ ಸಚಿವರು "ಸಿಬಿಎಸ್‌ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಎಸ್‌ಎಸ್‌ಎಲ್‌ಸಿ  ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. 

ನಮ್ಮ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ.  ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್‌ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ  ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು." ಎಂದು ಹೇಳಿದ್ದಾರೆ.

ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳದ ಹಿನ್ನೆಲೆ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ್ದು12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ಇದು ದೇಶಕ್ಕೆ ಮಾಡಿದ ಅವಮಾನ, ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!

Census 2027: 40 ಪ್ರಶ್ನೆಗಳು ಪ್ರಕಟ, ಉದ್ದೇಶವೇ ಶಂಕಾಸ್ಪದ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!

ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಗರಿ: ದೇಶೀಯವಾಗಿ ಫೈಟರ್ ಜೆಟ್ ಎಂಜಿನ್ ನಿರ್ಮಿಸಲಿವೆ ರಿಲಯನ್ಸ್-ರೋಲ್ಸ್ ರಾಯ್ಸ್!

Toxic: ಯಶ್ ಅಭಿನಯದ 'ಟಾಕ್ಸಿಕ್'ಗೆ ಸಿಕ್ತು ʻA’ ಸರ್ಟಿಫಿಕೇಟ್; ರನ್‌ಟೈಮ್‌ ಕೇಳಿದ್ರೆ ಥ್ರಿಲ್‌ ಆಗ್ತೀರಾ!