ನಾರಾಯಣ ಸ್ವಾಮಿ 
ರಾಜ್ಯ

ಅಂಬೇಡ್ಕರ್ ಸಮಾನತೆಯ ನಿಜವಾದ ಹೋರಾಟಗಾರ, ಸಮಸ್ತ ಶೋಷಿತರ ಧ್ವನಿ: ಸಂಸದ ಎ ನಾರಾಯಣಸ್ವಾಮಿ

ಡಾ.ಬಿ.ಆರ್‌.ಅಂಬೇಡ್ಕರ್ ಅವರು ದೇಶದ ಸಮಸ್ತ ಶೋಷಿತ ಸಮುದಾಯದ ಧ್ವನಿಯಾಗಿದ್ದರು, ಅವರು ಸಮಾನತೆಯ ನಿಜವಾದ ಹೋರಾಟಗಾರ ಅವರನ್ನು ಪಡೆದಿದ್ದು ದೇಶದ ಸೌಭಾಗ್ಯ ಎಂದು ಸಂಸದ ಎ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಚಿತ್ರದುರ್ಗ: ಡಾ.ಬಿ.ಆರ್‌.ಅಂಬೇಡ್ಕರ್ ಅವರು ದೇಶದ ಸಮಸ್ತ ಶೋಷಿತ ಸಮುದಾಯದ ಧ್ವನಿಯಾಗಿದ್ದರು, ಅವರು ಸಮಾನತೆಯ ನಿಜವಾದ ಹೋರಾಟಗಾರ ಅವರನ್ನು ಪಡೆದಿದ್ದು ದೇಶದ ಸೌಭಾಗ್ಯ ಎಂದು ಸಂಸದ ಎ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್‌ ಜಯಂತಿಯಲ್ಲಿ ಅವರು ಮಾತನಾಡಿದರು. ‘ಅಂಬೇಡ್ಕರ್‌ ಜನಿಸದೇ ಇದ್ದಿದ್ದರೆ ದೇಶದ ಬಹುಪಾಲು ಜನರ ಸ್ಥಿತಿ ಊಹಿಸಲು ಅಸಾಧ್ಯವಾಗಿತ್ತು. ನಾನು ಶಾಸಕ, ಸಚಿವ, ಸಂಸದನಾಗಿದ್ದಕ್ಕೆ ಅಂಬೇಡ್ಕರ್‌ ಕಾರಣ’ ಎಂದು ಹೇಳಿದರು.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬುದು ಡಾ.ಬಿ.ಆರ್.ಅಂಬೇಡ್ಕರ್‌ ಅವರ ಆಶಯವಾಗಿತ್ತು , ‘ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಮಹಾನ್‌ ಹೋರಾಟಗಾರ ಅಂಬೇಡ್ಕರ್‌. ಅಸ್ಪೃಶ್ಯತೆಯನ್ನು ತೊಲಗಿಸಲು ಹೋರಾಟ ಮಾಡಿದರು. ದಲಿತರ ಧ್ವನಿಯಾಗಿದ್ದರು’ ಎಂದು ಕೊಂಡಾಡಿದರು. ಶಾಸಕನಾಗಿದ್ದ ನಾನು ಸಂಸದನಾಗಲು ಅಂಬೇಡ್ಕರ್ ಅವರೇ ಕಾರಣ ಎಂದು ಹಾಡಿ ಹೊಗಳಿದರು. ಸಮಾಜದಲ್ಲಿ ಎಲ್ಲಾ ವರ್ಗದವರಿಗೂ ಶಿಕ್ಷಣ ನೀಡಬೇಕು ಎಂಬುದು ಅವರ ಮಹಾದಾಸೆಯಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT