ಬಸವಕಲ್ಯಾಣದಲ್ಲಿ ರೋಡ್ ಶೋದಲ್ಲಿ ಭಾಗವಹಿಸಿದ ರಾಜ್ಯ ಬಿಜೆಪಿ ನಾಯಕರು 
ರಾಜ್ಯ

ಮತದಾನ ಮುಗಿದ ನಂತರ ಉಪ ಚುನಾವಣಾ ಕ್ಷೇತ್ರಗಳಲ್ಲಿ ಕೊರೋನಾ ಪರೀಕ್ಷೆ: ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ 

ನಾಳೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಬೀದರ್ ನಲ್ಲಿ ಅಧಿಕ ಕೊರೋನಾ ಪ್ರಕರಣಗಳು ವರದಿಯಾಗುತ್ತಿವೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ, ಸೂಕ್ಷ್ಮ ನಿಗಾವಣೆ ಮತ್ತು ವಿಡಿಯೊಗ್ರಾಫಿಗಳನ್ನು ಒದಗಿಸಲಾಗಿದೆ.

ಬೆಂಗಳೂರು: ನಾಳೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಬೀದರ್ ನಲ್ಲಿ ಅಧಿಕ ಕೊರೋನಾ ಪ್ರಕರಣಗಳು ವರದಿಯಾಗುತ್ತಿವೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ, ಸೂಕ್ಷ್ಮ ನಿಗಾವಣೆ ಮತ್ತು ವಿಡಿಯೊಗ್ರಾಫಿಗಳನ್ನು ಒದಗಿಸಲಾಗಿದೆ.

ಬೆಳಗಾವಿ ಲೋಕಸಭಾ ಉಪ ಚುನಾವಣೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ನಿನ್ನೆ ಪ್ರಚಾರ ಅಂತ್ಯಗೊಂಡಿದ್ದು, ನಿನ್ನೆ ಮೊನ್ನೆ ಮನೆಮನೆಗೆ ಹೋಗಿ ಮತಯಾಚನೆ ಮಾಡಿದವರನ್ನು, ಅಧಿಕ ಸಂಖ್ಯೆಯಲ್ಲಿ ಜನದಟ್ಟಣೆ ಪ್ರದೇಶದಲ್ಲಿ ಭಾಗಿಯಾದವರನ್ನು, ರೋಡ್ ಶೋಗಳಲ್ಲಿ ಭಾಗಿಯಾದವರನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಬೆಳಗಾವಿ, ಮಸ್ಕಿ ಮತ್ತು ಬೀದರ್ ನ ಬಸವಕಲ್ಯಾಣ ಕ್ಷೇತ್ರದಲ್ಲಿ ನಾಳೆ ಮತದಾನ ನಡೆದ ನಂತರ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ತಪಾಸಣೆ ನಡೆಸಲಿದೆ. ಬೃಹತ್ ಪ್ರಮಾಣದಲ್ಲಿ ಜನದಟ್ಟಣೆ ಸೇರಿದಾಗ ಆಗುವ ಪರಿಣಾಮ ಬಗ್ಗೆ ನಮಗೆ ಒಂದು ವಾರ, ಹತ್ತು ದಿನ ಕಳೆದ ನಂತರ ಗೊತ್ತಾಗುತ್ತದೆ. ಮತದಾನ ಮುಗಿದ ಮೇಲೆ ಪರಿಸ್ಥಿತಿ ನೋಡಿಕೊಂಡು ತೀವ್ರ ಮಟ್ಟದಲ್ಲಿ ಕೊರೋನಾ ತಪಾಸಣೆ ಮಾಡುತ್ತೇವೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT