ಬಸವರಾಜ ಹೊರಟ್ಟಿ 
ರಾಜ್ಯ

ಇನ್ಮುಂದೆ ಸಚಿವಾಲಯದ ಸಿಬ್ಬಂದಿಗೆ ಕಠಿಣ ನಿಯಮ ಜಾರಿ: ಸಭಾಪತಿ ಬಸವರಾಜ ಹೊರಟ್ಟಿ

ಸಚಿವಾಲಯದ ಸಿಬ್ಬಂದಿಗೆ ಕಠಿಣ ನಿಯಮ ಜಾರಿಮಾಡಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಂದಾಗಿದ್ದಾರೆ.

ಬೆಂಗಳೂರು: ಸಚಿವಾಲಯದ ಸಿಬ್ಬಂದಿಗೆ ಕಠಿಣ ನಿಯಮ ಜಾರಿಮಾಡಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಂದಾಗಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೊರಟ್ಟಿ, ಸಚಿವಾಲಯದ ಸಿಬ್ಬಂದಿಗೆ ಬಯೋಮೆಟ್ರಿಕ್ ಕಡ್ಡಾಯ ಮಾಡಿದ್ದು, ಸ್ಯಾನಿಟೈಸ್ ಮಾಡಿ ಬಯೋಮೆಟ್ರಿಕ್ ಉಪಯೋಗಿಸಬೇಕು. ಕೊರೋನಾ ನೆಪವೊಡ್ಡಿ ಬಯೋಮೆಟ್ರಿಕ್ ತೆಗೆಯುವಂತಿಲ್ಲ. ತೆಗೆದರೆ ಸಿಬ್ಬಂದಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುವುದಿಲ್ಲ. ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವುದಿಲ್ಲ. ಹೀಗಾಗಿ ಬಯೋಮೆಟ್ರಿಕ್ ಕಡ್ಡಾಯ ಮಾಡಿದ್ದೇವೆ. ಸರಿಯಾದ ಸಮಯಕ್ಕೆ ಬರದವರಿಗೆ ಕ್ರಮತೆಗೆದುಕೊಳ್ಳುವುದಾಗಿ ಎಚ್ಚರಿಸಿದರು.

ಡಿ ಗ್ರೂಪ್ ನೌಕರರಿಗೆ ಸಮವಸ್ತ್ರ ವಿಚಾರವಾಗಿ ಪ್ರತಿಕ್ರಿಯಿಸಿದ ಸಭಾಪತಿ ಬಸವರಾಜ ಹೊರಟ್ಟಿ, ನೌಕರರು ಹೇಳಿದಂತೆ ಕುಣಿಯಲು ಸಾಧ್ಯವಿಲ್ಲ. ನಾವು ಜಾರಿ ಮಾಡಿದ ನಿಯಮವನ್ನು ಪಾಲಿಸಬೇಕಷ್ಟೆ ಎಂದರು.

ಸಮವಸ್ತ್ರ ಇದ್ದರೆ ಕರ್ತವ್ಯದಲ್ಲಿ ಶಿಸ್ತು ಹೆಚ್ಚಾಗಲಿದೆ. ಬಿಳಿ ಬಣ್ಣ ಬೇಡವೆಂದು ಮನವಿ‌ಮಾಡಿದ್ದ ನೌಕರರ ಬೇಡಿಕೆಯನ್ನು ಪರಿಗಣಿಸಲಾಗದು. ಬಣ್ಣ ಬದಲಾಯಿಸಲು ಸಾಧ್ಯವಿಲ್ಲ. ಈಗಾಗಲೇ ಯೂನಿಫಾರಂ ಬಗ್ಗೆ ಹೇಳಿದ್ದೇವೆ. ಸರ್ಕಾರಿ ಮಳಿಗೆಯಿಂದಲೇ ಸಮವಸ್ತ್ರ ಖರೀದಿಸಲಾಗುವುದು. ಮಹಿಳೆಯರಿಗೆ ಸೀರೆಗೆ ಬದಲು ಚೂಡಿದಾರ್ ಹಾಕಿಕೊಳ್ಳಲು ಅವಕಾಶ ನೀಡಲಾಗಿದೆ‌ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

Anchor Anushree Marriage: ರೋಷನ್ ಜೊತೆ ಸಪ್ತಪದಿ ತುಳಿದ ಆ್ಯಂಕರ್ ಅನುಶ್ರೀ

SCROLL FOR NEXT