ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ್ 
ರಾಜ್ಯ

ಯುಬಿ ಸಿಟಿ ಸ್ಕೈ ಬಾರ್ ಹಲ್ಲೆ ಪ್ರಕರಣ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಖುಲಾಸೆ 

ಕಳೆದ 7 ವರ್ಷಗಳ ಹಿಂದೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನಗರದ ಯುಬಿ ಸಿಟಿಯಲ್ಲಿರುವ ಸ್ಕೈಬಾರ್ ನಲ್ಲಿ ಪೊಲೀಸರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ್ ಹಾಗೂ ಅವರ ಆಪ್ತ ಸೋಮಶೇಖರ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ. 

ಬೆಂಗಳೂರು: ಕಳೆದ 7 ವರ್ಷಗಳ ಹಿಂದೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನಗರದ ಯುಬಿ ಸಿಟಿಯಲ್ಲಿರುವ ಸ್ಕೈಬಾರ್ ನಲ್ಲಿ ಪೊಲೀಸರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ್ ಹಾಗೂ ಅವರ ಆಪ್ತ ಸೋಮಶೇಖರ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ. 

ಬೆಂಗಳೂರು ಯುಬಿ ಸಿಟಿಯ ಸ್ಕೈ ಬಾರ್ ಹಲ್ಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ. ಜನಪ್ರತಿನಿಧಿಗಳ‌ ವಿಶೇಷ ನ್ಯಾಯಾಲಯದ ನ್ಯಾ. ತ್ಯಾಗರಾಜ್ ಎನ್.ಇನವಳ್ಳಿ ತೀರ್ಪು ನೀಡಿದ್ದಾರೆ. 

2014 ರ ಜುಲೈ 1ರ ರಾತ್ರಿ ನಡೆದಿದ್ದ ಪ್ರಕರಣವೊಂದು ಇಡೀ ರಾಜ್ಯದ ಗಮನ ಸೆಳೆದಿತ್ತು. ಯುಬಿ ಸಿಟಿ ಸ್ಕೈ ಬಾರ್'ನಲ್ಲಿ ಹುಟ್ಟುಹಬ್ಬ ಆಚರಣೆ ಆಯೋಜಿಸಲಾಗಿತ್ತು. ರಾತ್ರಿ 11.30ರವರೆಗೆ ಮಾತ್ರ ಬಾರ್ ತೆರೆಯಲು ಕಾನೂನಿನಲ್ಲಿ ಅನುಮತಿ ಇದೆ. ಸಮಯ ಮೀರಿದ ಬಳಿಕವೂ ಮದ್ಯ ಪೂರೈಸುವಂತೆ ಪಾರ್ಟಿಯಲ್ಲಿ ಮೈ ಮರೆದ್ದವರು ಬಾರ್ ಸಿಬ್ಬಂದಿಯನ್ನು ಒತ್ತಾಯಿಸಿದ್ದರು. 

ಇದಕ್ಕೆ ಒಪ್ಪದಿದ್ದಾಗ ರಾದ್ಧಾಂತ ನಡೆದಿತ್ತು. ಬಾರ್ ನಲ್ಲಿ ಗಲಾಟೆ ನಡೆಸುತ್ತಿರುವುದನ್ನು ಅನಾಮಧೇಯ ವ್ಯಕ್ತಿಯೊಬ್ಬರು ಪೊಲೀಸರಿಗೆ ತಿಳಿಸಿದ್ದರು. ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರಾದ ಕಿರಣ್ ಕುಮಾರ್ ಹಾಗೂ ಪ್ರಶಾಂತ್ ನಾಯಕ್ ಅವರು ಆಗ ಶಾಸಕರಾಗಿದ್ದ ಕಾಶಪ್ಪನವರ್ ಮತ್ತವರ ಬೆಂಬಲಿಗರಿಗೆ ತಿಳಿ ಹೇಳಿದರೂ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಅವರಿರಲಿಲ್ಲ. 

ಇದನ್ನರಿತ ಪೊಲೀಸರು ಅಲ್ಲಿನ ಘಟನೆಯನ್ನು ಚಿತ್ರೀಕರಿಸಲು ಆರಂಭಿಸಿದ್ದರು. ಬಳಿಕ ಕಾಶಪ್ಪನವರ್ ಬೆಂಬಲಿಗರು ಪೊಲೀಸರ ಮೇಲೆ ಹಲ್ಲೆ ನಡೆಸಿ ಚಿತ್ರೀಕರಣ ನಡೆಸಿದ್ದ ಮೊಬೈಲ್ ಕಿತ್ತುಕೊಂಡಿದ್ದರು ಎಂದು ಆರೋಪಿಸಲಾಗಿತ್ತು. ಘಟನೆ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಳಾದ ನಂತರ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನಂತರ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT