ಸಾಂದರ್ಭಿಕ ಚಿತ್ರ 
ರಾಜ್ಯ

ಸಾಗಣೆ ದರ ಹೆಚ್ಚಳ: 'ಹಣ್ಣುಗಳ ರಾಜ' ಮಾವಿನ ಹಣ್ಣಿನ ರಫ್ತಿನ ಮೇಲೆ ಎಫೆಕ್ಟ್!

ಹಣ್ಣುಗಳ ರಾಜ ಮಾವು ಈಗಾಗಲೇ ಮಾರುಕಟ್ಟೆ ಪ್ರವೇಶಿಸಿದೆ, ಬೇಸಿಗೆ ಕಾಲದಲ್ಲಿ ಮಾವಿನ ಹಣ್ಣಿನದ್ದೇ ದರ್ಬಾರ್. ಆದರೆ ಸಾಗಣೆ ವೆಚ್ಚ ಅಧಿಕವಾಗಿರುವ ಕಾರಣ ಈ ಬಾರಿಯು ರಪ್ತಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ

ಬೆಂಗಳೂರು: ಹಣ್ಣುಗಳ ರಾಜ ಮಾವು ಈಗಾಗಲೇ ಮಾರುಕಟ್ಟೆ ಪ್ರವೇಶಿಸಿದೆ, ಬೇಸಿಗೆ ಕಾಲದಲ್ಲಿ ಮಾವಿನ ಹಣ್ಣಿನದ್ದೇ ದರ್ಬಾರ್. ಆದರೆ ಸಾಗಣೆ ವೆಚ್ಚ ಅಧಿಕವಾಗಿರುವ ಕಾರಣ ಈ ಬಾರಿಯು ರಪ್ತಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಸರಕು ಸಾಗಣೆ ದರ ಹೆಚ್ಚಿರುವ ಹಿನ್ನೆಲೆಯಲ್ಲಿ ರೈತರಿಗೆ ರಪ್ತು ಅನಪೇಕ್ಷಿತವಾಗಿದೆ.ಪ್ರತಿ ಕೆಜಿಗೆ 250 ರು ದರ ನಿಗದಿ ಪಡಿಸಿರುವ ಕಾರಣ ರಪ್ತಿನ ಮೇಲೆ ಪರಿಣಾಮ ಬೀರಲಿದೆ ಎಂದು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ  ನಿಗಮದ ಅಧ್ಯಕ್ಷ ಕೆವಿಎನ್ ನಾಗರಾಜ್ ಹೇಳಿದ್ದಾರೆ.

ಸರಕು ಸಾಗಣೆ ದರ 100 ರು ಹೆಚ್ಚಾಗಿದ್ದು ಅದರ ವೆಚ್ಚವನ್ನು ರೈತರೇ ಭರಿಸಬೇಕಾಗಿದೆ. ಆದರೆ ಅದು ರೈತರಿಗೆ ಬೇಕಾಗಿಲ್ಲ,  ಒಂದು ಕೆಜಿ  ಆಲ್ಪಾನ್ಸೋ ಮಾವಿನ ಹಣ್ಣಿನ ಬೆಲೆ 200-250 ರು.ರಾಮನಗರದಿಂದ ತರಲು ಪ್ರತಿ ಕೆಜಿಗೆ 100 ರು ವೆಚ್ಚ ಭರಿಸಬೇಕಾಗುತ್ತದೆ.

ಗಲ್ಫ್ ದೇಶಗಳಿಂದ ರಾಜ್ಯದ ಮಾವಿನ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆಯಿದೆ, ಇದರ ಜೊತೆಗೆ ಮಧ್ಯ ಪ್ರಾಚ್ಯ ದೇಶಗಳಿಂದಲೂ ಮಾವಿಗೆ ಬೇಡಿಕೆಯಿದೆ. ರಾತು ಮತ್ತು ಕೊಳ್ಳುವವರ ನಡುವೆ ಸುಗಮ ವ್ಯಾಪಾರಕ್ಕಾಗಿ ಮಾವು ಮಂಡಳಿ ಬದ್ಧವಾಗಿದೆ ಎಂದು ತಿಳಿಸಿದೆ.

ಕಳೆದ ವರ್ಷ ಕೋವಿಡ್ ಕಾರಣದಿಂದಾಗಿ  ಮಾವಿನ ಹಣ್ಣು ಆನ್ ಲೈನ್ ನಲ್ಲಿ ಹೆಚ್ಚು ಮಾರಾಟವಾಗಿತ್ತು.  ರೈತರು ಮಂಡಳಿಯ ಆನ್‌ಲೈನ್ ಪೋರ್ಟಲ್ ಮೂಲಕ ಬೆಂಗಳೂರಿನಲ್ಲಿ 100 ಟನ್ ಮಾರಾಟ ಮಾಡಿದ್ದಾರೆ. ಅಲ್ಲದೆ, ಅಪಾರ್ಟ್ಮೆಂಟ್ ಸಂಘಗಳೊಂದಿಗೆ ಸಹಭಾಗಿತ್ವದಿಂದ ಸುಮಾರು 600 ಟನ್ ಮಾರಾಟವಾಯಿತು. ಈ ವರ್ಷ ಉತ್ಪಾದನೆಯು 14 ಲಕ್ಷ ಟನ್ ಎಂದು ಅವರು ನಿರೀಕ್ಷಿಸುತ್ತಿದ್ದಾರೆ, ಆದರೆ ಮಳೆಯಿಂದಾಗಿ ಉತ್ಪಾದನೆಯು 4-5 ಲಕ್ಷ ಟನ್ಗಳಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ನಾಗರಾಜ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT