ಅಖಂಡ ಶ್ರೀನಿವಾಸ್ ಮೂರ್ತಿ 
ರಾಜ್ಯ

ಡಿಜೆ ಹಳ್ಳಿ ಗಲಭೆ ಪ್ರಕರಣ: ಹಾನಿಗೊಳಗಾಗಿದ್ದ ಮನೆ ನೆಲಸಮಗೊಳಿಸಿ ಮರುನಿರ್ಮಾಣ ಕಾರ್ಯ ಕೈಗೊಂಡ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಭಸ್ಮಗೊಂಡಿದ್ದ ಮನೆಯನ್ನು ನೆಲಸಮಗೊಳಿಸಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಮರು ನಿರ್ಮಾಣ ಮಾಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಭಸ್ಮಗೊಂಡಿದ್ದ ಮನೆಯನ್ನು ನೆಲಸಮಗೊಳಿಸಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಮರು ನಿರ್ಮಾಣ ಮಾಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. 

ಗಲಭೆಯಿಂದಾಗಿ ಅರ್ಧದಷ್ಟು ಮನೆ ಸುಟ್ಟು ಕರಕಲಾಗಿದೆ. ಹೀಗಾಗಿ ಮನೆಯನ್ನು ನೆಲಸಮಗೊಳಿಸಿ ಮರು ನಿರ್ಮಾಣ ಮಾಡಲಾಗುತ್ತಿದೆ. ಕಳೆದ 9 ತಿಂಗಳುಗಳಿಂದ ನನ್ನ ಕುಟುಂಬ ಸಾಕಷ್ಟು ಸಂಕಷ್ಟವನ್ನು ಅನುಭವಿಸುತ್ತಿದೆ. ಗಲಭೆ ಬಳಿಕ ನಾವು ಸಂಬಂಧಿಕರ ಮನೆಯಲ್ಲಿದ್ದೇವೆಂದು ಅಖಂಡ ಶ್ರೀನಿವಾಸ್ ಮೂರ್ತಿಯವರು ಹೇಳಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಂದ ನನಗೆ ಯಾವುದೇ ರೀತಿಯ ಬೆಂಬಲಗಳೂ ಸಿಕ್ಕಿಲ್ಲ. ಈಗಾಗಲೇ ಸಾಕಷ್ಟು ಬಾರಿ ಅವರನ್ನು ಭೇಟಿ ಮಾಡಿದ್ದೇನೆ, ವೈಯಕ್ತಿಕವಾಗಿಯೂ ಮಾತನಾಡಿದ್ದೇನೆ. ಕೆಪಿಸಿಸಿ ಅಧಅಯಕ್ಷರು ಮಾಜಿ ಮೇಯರ್ ಹಾಗೂ ಕಾರ್ಪೊರೇಟರ್ ಸಂಪತ್ ರಾಜ್ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ಆದರೂ ನನಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೈತಿಕ ಬೆಂಬಲವಿದೆ. ಶೀಘ್ರದಲ್ಲೇ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲಿದ್ದು, ಡಿಕೆ.ಶಿವಕುಮಾರ್ ಮಾಡುತ್ತಿರುವ ಅನ್ಯಾಯದ ಕುರಿತು ಗಮನ ಸೆಳೆಯಲಾಗುತ್ತದೆ ಎಂದು ತಿಳಿಸಿದ್ದಾರೆ. 

ಆಗಸ್ಟ್ 11 ರಂದು ಡಿಜೆಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿದ್ದು, ಗಲಭೆ ವೇಳೆ ದುಷ್ಕರ್ಮಿಗಳು ಅಖಂಡ ಶ್ರೀನಿವಾಸ ಮೂರ್ತಿಯವರು ಮನೆಗೆ ಬೆಂಕಿ ಹಚ್ಚಿ, ದಾಂಧಲೆ ನಡೆಸಿದ್ದರು. ಪ್ರಕರಣ ಸಂಬಂಧ ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರು 400ಕ್ಕೂ ಹೆಚ್ಚು ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಇದಲ್ಲದೆ, ಪ್ರಕರಣ ಸಂಬಂಧ ಹಾನಿಗೊಳಗಾದ ಅಖಂಡ ಶ್ರೀನಿವಾಸ ಮೂರ್ತಿ ಮನೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವನ್ನು ದುಷ್ಕರ್ಮಿಗಳಿಂದಲೇ ವಸೂಲಿ ಮಾಡಲು ಸರ್ಕಾರ ನಿರ್ಧರಿಸಿದ್ದು, ನಷ್ಟ ಕುರಿತ ಮಾಹಿತಿ ಕಲೆಹಾಕಲು ಹೈಕೋರ್ಟ್ ಕೂಡ ಕೆಎಸ್ ಕೆಂಪಣ್ಣ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT