ರಾಜ್ಯ

ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರು ದಾರುಣ ಸಾವು

Raghavendra Adiga

ಮಡಿಕೇರಿ: ಜಲಪಾತಕ್ಕೆ ಬಿದ್ದು ಇಬ್ಬರು ದಾರುಣ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.

ಭಾನುವಾರ ನಡೆದ ಘಟನೆಯಲ್ಲಿ ಸುಂಟಿಕೊಪ್ಪದ ಶಶಿಕುಮಾರ್​ (32) ಮತ್ತು ದಿವ್ಯ (20) ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ವೀಕೆಂಡ್​ ಹಿನ್ನೆಲೆಯಲ್ಲಿ ಆರು ಜನರ ತಂಡ ಜಲಪಾತಕ್ಕೆ ಆಗಮಿಸಿದ್ದು ಈ ವೇಳೆ ದಿವ್ಯಾ ಆಯತಪ್ಪಿ ಜಲಪಾತಕ್ಕೆ ಬಿದ್ದಿದ್ದಾಳೆ. ಈ ವೇಳೆ ನೀರಿನಲ್ಲಿ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ತೆರಳಿದ ಶಶಿಕುಮಾರ್ ಸಹ ಸಾವಿಗೀಡಾಗಿದ್ದಾರೆ.

 ಮಲ್ಲಳ್ಳಿ ಜಲಪಾತ

ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ

SCROLL FOR NEXT