ರಾಜ್ಯ

ಮೈಸೂರು ಸೈಯದ್ ಇಸಾಕ್ ಗ್ರಂಥಾಲಯಕ್ಕೆ ಬೆಂಕಿ ಕೇಸ್: ಆರೋಪಿ ಬಂಧನ

Raghavendra Adiga

ಮೈಸೂರು: ಮೈಸೂರಿನ ಸೈಯದ್​ ಇಸಾಕ್ ಗ್ರಂಥಾಲಯ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಸ್ಥಳೀಯ ನಿವಾಸಿ ಸೈಯದ್ ನಾಜೀರ್ ಎಂದು ಗುರುತಿಸಲಾಗಿದೆ. ಈತ ಗ್ರಂಥಾಲಯದ ಪಕ್ಕದಲ್ಲಿದ್ದ ಸೋಫಾ ರಿಪೇರಿ ಅಂಗಡಿಯ ಬಳಿ ಬಿಡಿ ಹಚ್ಚಿ ಬೆಂಕಿ ಕಡ್ಡಿಯನ್ನು ಆರಿಸದೆ ಬಿಸಾಡಿದ್ದಾನೆ. ಇದೇ ಕಿಡಿಯಿಂದಾಗಿ ಗ್ರಂಥಾಲಯ ಸುಟ್ಟು ಹೋಗಿದೆ ಎನ್ನುವುದು ಸ್ಥಳದಲ್ಲಿದ್ದ  ಸಿಸಿಟಿವಿ ದೃಶ್ಯದಿಂದ ತಿಳಿದುಬಂದಿದೆ.

ಕನ್ನಡ ಪ್ರೇಮಿಯಾದ ಸೈಯದ್ ಇಸಾಕ್ ಮೈಸೂರಿನ ರಾಜೀವ್ ನಗರದಲ್ಲಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯಕ್ಕೆ ಇದೇ ಏಪ್ರಿಲ್ 8ರಂದು ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ ಸಾವಿರಾರು ಪುಸ್ತಕಗಳು ಸುಟ್ಟು ಭಸ್ಮವಾಗಿದ್ದವು. ಇದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು ಬೆಂಕಿ ಹಚ್ಚಿದವರ ಪತ್ತೆಗೆ  ಎಸಿಪಿ ನೇತೃತ್ವದ ತಂಡ ರಚಿಸಲಾಗಿತ್ತು.

SCROLL FOR NEXT