ರಾಜ್ಯ

ಕೋವಿಡ್ ಎಫೆಕ್ಟ್: ವಿಧಾನಸೌಧಕ್ಕೆ ಜನರ ಪ್ರವೇಶಕ್ಕೆ ನಿರ್ಬಂಧ

Manjula VN

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧಕ್ಕೆ ನಿಗದಿತ ಭೇಟಿ ಹೊರತುಪಡಿಸಿ ಸಾರ್ವಜನಿಕರ ಸಾಮಾನ್ಯ ಪ್ರವೇಶಕ್ಕೆ ನಿರ್ಬಂಧ ಹೇರಿ ಸರ್ಕಾರ ಸುತ್ತೋಲೆ ಹೊರಡಿಸಿದೆ. 

ಸಚಿವರ ಕಚೇರಿ ಮತ್ತು ಸಚಿವಾಲಯದ ಬಹುತೇಕ ಕಚೇರಿಯಲ್ಲಿ ನಿತ್ಯ ಕೋವಿಡ್-19 ಸೋಂಕಿನ ಪ್ರಕರಣ ವರದಿಯಾಗುತ್ತಲೇ ಇವೆ. ಹೀಗಾಗಿ ಸಚಿವಾಲಯದ ಸಿಬ್ಬಂದಿ, ಅಧಿಕಾರಿ ಮತ್ತು ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತದ ಹಿತದೃಷ್ಟಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. 

ವಿಧಾನಸೌಧದಲ್ಲಿನ ಮುಖ್ಯಮಂತ್ರಿಯವರ ಸಚಿವಾಲಯ, ಸಚಿವ ಮತ್ತು ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಿದ ಭೇಟಿ ಹೊರತುಪಡಿಸಿ ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಶವನ್ನು ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ. 

SCROLL FOR NEXT