ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್ -19: ಏ. 23 ರಿಂದ ಚಿತ್ರಮಂದಿರ ಬಂದ್ ಮಾಡಲು ಮೈಸೂರಿನ ಸಿನೆಮಾ ಹಾಲ್ ಮಾಲೀಕರ ನಿರ್ಧಾರ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಂಕು ಹರಡುವುದನ್ನು ತಡೆಗಟ್ಟಲು ಕಠಿಣ ನಿಯಮಗಳನ್ನು ಘೋಷಿಸಲು ಮುಂದಾಗಿರುವ ಸಮಯದಲ್ಲಿ ಮೈಸೂರಿನ....

ಮೈಸೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಂಕು ಹರಡುವುದನ್ನು ತಡೆಗಟ್ಟಲು ಕಠಿಣ ನಿಯಮಗಳನ್ನು ಘೋಷಿಸಲು ಮುಂದಾಗಿರುವ ಸಮಯದಲ್ಲಿ ಮೈಸೂರಿನ ಸಿನೆಮಾ ಹಾಲ್ ಮಾಲೀಕರು ಏಪ್ರಿಲ್ 23 ರಿಂದ ಸ್ವಯಂಪ್ರೇರಿತವಾಗಿ ಚಿತ್ರಮಂದಿರಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲೆಯ 35ಕ್ಕೂ ಹೆಚ್ಚು ಚಿತ್ರಮಂದಿರಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಚಲನಚಿತ್ರ ಪ್ರದರ್ಶನಕಾರರ ಒಕ್ಕೂಟದ ಉಪಾಧ್ಯಕ್ಷರೂ ಆಗಿರುವ ಗಾಯತ್ರಿ ಟಾಕೀಸ್ ಮಾಲೀಕ ಎಂ ಆರ್ ರಾಜರಾಮ್ ಅವರು ಹೇಳಿದ್ದಾರೆ.

ಕೊರೋನಾ ಎರಡನೇ ಅಲೆ ನಿಯಂತ್ರಿಸುವಲ್ಲಿ ನಮ್ಮ ಸಾಮಾಜಿಕ ಜವಾಬ್ದಾರಿಯನ್ನು ಪೂರೈಸುವ ನಿಟ್ಟಿನಲ್ಲಿ ಇದು ಒಂದು ಸಣ್ಣ ಹೆಜ್ಜೆಯಾಗಿದೆ ಮತ್ತು ನಮ್ಮ ಕಾರ್ಮಿಕರು ಮತ್ತು ಪ್ರೇಕ್ಷಕರ ರಕ್ಷಣೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ವೈರಸ್ ನಿಯಂತ್ರಿಸಲು ಸರ್ಕಾರವನ್ನು ಬೆಂಬಲಿಸಲು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಮತ್ತು ಮೈಸೂರು ನಗರ, ನಂಜನಗೂಡು, ಕೆ.ಆರ್.ನಗರ ಮತ್ತು ಜಿಲ್ಲೆಯ ಇತರ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿನ ಎಲ್ಲಾ ಚಿತ್ರಮಂದಿರಗಳು ಏಪ್ರಿಲ್ 23 ರಿಂದ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

IPL 2026: ವಿರಾಟ್ ಕೊಹ್ಲಿ ನೆಟ್​​ನಲ್ಲಿ ಕಠಿಣ ಅಭ್ಯಾಸ! Video ವೈರಲ್

ರಾಜ್ಯದಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

'ಜಸ್ಪ್ರೀತ್ ಬುಮ್ರಾ ನನ್ನಿಂದ ನಿಧಾನಗತಿಯ ಬೌಲಿಂಗ್ ಕಲಿತರು': ಚರ್ಚೆಗೆ ಗ್ರಾಸವಾದ ಪಾಕ್ ಮೂಲದ ವೇಗಿಯ ಹೇಳಿಕೆ!

SCROLL FOR NEXT