ಸೋಮಣ್ಣ 
ರಾಜ್ಯ

ಕುಶಲಕರ್ಮಿಗಳಿಗೆ ವಸತಿ ಸಮುಚ್ಚಯ ನಿರ್ಮಿಸಲು ಸರ್ಕಾರದ ಪ್ರಸ್ತಾವನೆ

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ (ಕೆಎಸ್‌ಎಚ್‌ಡಿಸಿ) ಈ ಕುಶಲಕರ್ಮಿಗಳಿಗೆ ವಸತಿ ಸಮುಚ್ಛಯ ನಿರ್ಮಿಸುವ ಆಲೋಚನೆಯೊಂದಿಗೆ ಬಂದಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ (ಕೆಎಸ್‌ಎಚ್‌ಡಿಸಿ) ಈ ಕುಶಲಕರ್ಮಿಗಳಿಗೆ ವಸತಿ ಸಮುಚ್ಛಯ ನಿರ್ಮಿಸುವ ಆಲೋಚನೆಯೊಂದಿಗೆ ಬಂದಿದೆ.

ಏಕೆಂದರೆ ರಾಜ್ಯಾದ್ಯಂತ ಭೂಮಿಯ ಬೆಲೆ ಗಗನಕ್ಕೇರಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಮನೆ ನಿರ್ಮಾಣ ಮಾಡಲು ಭೂಮಿಯ ಕೊರತೆಯಿದೆ, ಹೀಗಾಗಿ ವಸತಿ ಸಮುಚ್ಛಯ ನಿರ್ಮಿಸಲು ಮುಂದಾಗಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ವಸತಿ ಯೋಜನೆಗಳಿಗೆ ಭೂಮಿ ಶೋಧ ನಡೆಸುವುದು ಕಷ್ಟದ ಕೆಲಸವಾಗಿದೆ, ಹೀಗಾಗಿ ಅಪಾರ್ಟ್ ಮೆಂಟ್ ರೀತಿಯ ವಸತಿ ಸಮುಚ್ಛಯ ನಿರ್ಮಿಸಲು ಮುಂದಾಗಿದೆ. 

ಮೈಸೂರು, ಸಿರಸಿ, ಸಾಗರ, ಬೀದರ್, ಶಿವಮೊಗ್ಗ, ಬೆಂಗಳೂರು ಮತ್ತು ಚನ್ನಪಟ್ಟಣ ಸೇರಿದಂತೆ 12 ಪ್ರದೇಶಗಳಲ್ಲಿ ಕರಕುಶಲ ಸಂಕೀರ್ಣ ಕ್ಲಸ್ಟರ್‌ಗಳನ್ನು ರಾಜ್ಯ ಹೊಂದಿದೆ, ಅಲ್ಲಿ ವಸತಿ  ಸಂಕೀರ್ಣಗಳನ್ನು ಸಹ ನಿರ್ಮಿಸಬಹುದಾಗಿದೆ. ಈಗಾಗಲೇ ಅಧಿಕಾರಿಗಳು ಜವಳಿ ಇಲಾಖೆಯನ್ನು ಸಂಪರ್ಕಿಸಿದ್ದು, ಅದರ ಅಡಿಯಲ್ಲಿ  ಲಭ್ಯವಿರುವ ಯೋಜನೆಗಳನ್ನು ಪರಿಗಣಿಸಲು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪತ್ರ ಬರೆದಿದ್ದಾರೆ.

ಇಲಾಖೆ ವಸತಿ ಸಚಿವ ವಿ ಸೋಮಣ್ಣ ಅವರನ್ನು ಸಂಪರ್ಕಿಸಿದ್ದು ಉತ್ತರಕ್ಕಾಗಿ ಕಾಯುತ್ತಿದೆ.  ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ವಸತಿ ಸಮುಚ್ಛಯ ನಿರ್ಮಾಣ ಮಾಡಿಕೊಡಲು ಅವಕಾಶವಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ, ಯಾವ್ಯಾವ ಪ್ರದೇಶದಲ್ಲಿ ಸಮುಚ್ಚಯ ನಿರ್ಮಿಸಲು ಸಾಧ್ಯವಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ,ಕೆಎಸ್ ಎಚ್ ಡಿಸಿ ಎಂ ಡಿ ರೂಪಾ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT