ರಾಜ್ಯ

ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೋನಾದಿಂದ ಸಾವು

Raghavendra Adiga

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಸೋಮವಾರ ಬೆಳಿಗ್ಗೆ ಸಚಿವ ಸುರೇಶ್ ಕುಮಾರ ಅವರ ಆಪ್ತ ಸಹಾಯಕ ಎಚ್.ಜೆ. ರಮೇಶ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಮೇಶ್ ಅವರಿಗೆ ಏಪ್ರಿಲ್ 13ರಂದು ಕೊರೋನಾ ಇರುವುದು ದೃಢವಾಗಿತ್ತು.

ರಮೇಶ್ ಅವರು ಸುಮಾರು ಎಂಟು ವರ್ಷಗಳಿಂದ ಸಚಿವರ ಬಳಿ ಕೆಲಸ ಮಾಡುತ್ತಿದ್ದರು.

ಇನ್ನು ತಮ್ಮ ಆಪ್ತ ಸಹಾಯಕ ನಿಧನವಾಗಿರುವ ಬಗ್ಗೆ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

"ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ HJ ರಮೇಶ್ ಇನ್ನಿಲ್ಲ. ರಮೇಶ್ ಸುಮಾರು ೮ ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ" ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. 

SCROLL FOR NEXT