ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸರಗಳ್ಳನಿಗೆ ಮನ ಬಂದಂತೆ ಥಳಿಸಿದ ಸಾರ್ವಜನಿಕರು; ನಿಮ್ಹಾನ್ಸ್ ನಲ್ಲಿ ಸಾವು

ವೃದ್ಧೆಯೊಬ್ಬರ ಸರ ಕಸಿದು ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದು ಸಾರ್ವಜನಿಕರು ಮನಬಂದಂತೆ ಥಳಿಸಿದ ಕಾರಣ ಆತ ಸಾವನ್ನಪ್ಪಿದ್ದಾನೆ

ಬೆಂಗಳೂರು: ವೃದ್ಧೆಯೊಬ್ಬರ ಸರ ಕಸಿದು ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದು ಸಾರ್ವಜನಿಕರು ಮನಬಂದಂತೆ ಥಳಿಸಿದ ಕಾರಣ ಆತ ಸಾವನ್ನಪ್ಪಿದ್ದಾನೆ.

ಭಾನುವಾರ ಮಧ್ಯಾಹ್ನ ಮಹೇಶ್.ಜಿ ಎಂಬಾತ ಮಹಿಳೆಯೋರ್ವರ ಸರ ಕಸಿದು ಪರಾರಿಯಾಗಲು ಯತ್ನಿಸಿದ, ಈ ವೇಳೆ ಆತನನ್ನು ಹಿಡಿದ ಮಾದನಾಯಕನಹಳ್ಳಿ ಸಾರ್ವಜನಿಕರು ಮನ ಬಂದಂತೆ ಥಳಿಸಿದ್ದಾರೆ, ಗಾಯಗೊಂಡಿದ್ದ ಆತನನ್ನು  ನಿಮ್ಹಾನ್ಸ್ ಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸೋಮವಾರ ಸಾವನ್ನಪ್ಪಿದ್ದಾನೆ.

ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮಹೇಶ್, ಸರಣಿ ಸರಗಳ್ಳತನದಲ್ಲಿಯೂ ಭಾಗಿಯಾಗಿದ್ದ, ಜೊತೆಗೆ ಕೊಲೆ ಯತ್ನ ಪ್ರಕರದಲ್ಲಿಯೂ ಆತನ ಹೆಸರಿತ್ತು.  ಜೂಜಾಟದ ಆರೋಪದ ಮೇಲೆ ಇತ್ತೀಚೆಗೆ ಸೂರ್ಯ ಸಿಟಿ ಪೊಲೀಸರು ಆತನನ್ನು ಬಂಧಿಸಿದ್ದರು.

ಶಾಂತಮ್ಮ ಎಂಬುವರು ಮಧ್ಯಾಹ್ನ 12.30ರ ಸುಮಾರಿಗೆ ತಮ್ಮ ಇಬ್ಬರು ಮೊಮ್ಮಕ್ಕಳೊಂದಿಗೆ ಅಂಗಡಿಗೆ ತೆರಳುತ್ತಿದ್ದರು, ಈ ವೇಳೆ ಸ್ಕೂಟರ್ ನಲ್ಲಿ ಬಂದ ಮಹೇಶ್ ಆಕೆಯ ಚಿನ್ನದ ಸರ ಕಸಿದು ಪರಾರಿಯಾಗುತ್ತಿದ್ದ, ಈ ವೇಳೆ ಮಹಿಳೆ ಶಾಂತಮ್ಮ ಜೋರಾಗಿ ಕೂಗಿಕೊಂಡಿದ್ದಾರೆ.

ಇದನ್ನು ಗಮನನಿಸಿದ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿ ನಂತರ ಪೊಲೀಸರಿಗೊಪ್ಪಿಸಿದ್ದಾರೆ.ಆತನನ್ನು ಪ್ರಥಮ ಚಿಕಿತ್ಸೆ ಕೊಡಿಸಿ ನಿಮ್ಹಾನ್ಸ್ ಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಿಸದೇ ಆತನ ಸಾವನಪ್ಪಿದ್ದಾನೆ. ಈ ಸಂಬಂಧ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!