ನಕಲಿ ಔಷಧಿಗಳ ಪರಿಶೀಲನೆ 
ರಾಜ್ಯ

ನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲ ಬೇಧಿಸಿದ ಮೈಸೂರು ಪೊಲೀಸರು: ಖಾಸಗಿ ಆಸ್ಪತ್ರೆ ನರ್ಸ್ ಬಂಧನ

ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆಯಿಂದಾಗಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ

ಮೈಸೂರು: ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆಯಿಂದಾಗಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. 

ನಕಲಿ ಔಷಧಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಧಂತೆ ಮೈಸೂರಿನ ಸಿಸಿಬಿ ಪೊಲೀಸರು ನಗರದ ಖಾಸಗಿ ಆಸ್ಪತ್ರೆ ಸ್ಟಾಫ್‌ ನರ್ಸ್ ಗಿರೀಶ್  ಎಂಬಾತನನ್ನು ಬಂಧಿಸಿದ್ದಾರೆ. ಈತನೊಂದಿಗೆ ಸಹಕರಿಸಿದ್ದ ಶಿವಪ್ಪ, ಮಂಗಳ, ಮಂಜುನಾಥ್ ಮತ್ತು ಪ್ರಶಾಂತ್ ಎಂಬುವರನ್ನು ಸಹ ವಶಕ್ಕೆ ಪಡೆಯಲಾಗಿದೆ. 

ಬಂಧಿತ ಆರೋಪಿಗಳಿಂದ 2.82 ಲಕ್ಷ ರೂ. ನಗದು ಹಾಗೂ 800ಕ್ಕೂ ಹೆಚ್ಚು ರೆಮ್ಡೆಸಿವಿರ್ ನಕಲಿ ಔಷಧಿ ಬಾಟಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಗಿರೀಶ್‌, ಸೆಪ್ಟ್ರಿಯಾಕ್ಸೊನ ಎಂಬ ಆ್ಯಂಟಿಬಯೋಟಿಕ್ ಔಷಧ ಹಾಗೂ ನಾರ್ಮಲ್ ಸಲೈನ್ ಬಳಕೆ ಮಾಡಿ ನಕಲಿ ಔಷಧಿ ತಯಾರಿಸುತ್ತಿದ್ದ. 

ಕೇವಲ 100 ರೂ.ಗಳಿಗೆ ನಕಲಿ ರೆಮ್ಡೆಸಿವಿರ್ ಔಷಧಿ ತಯಾರಿಸಿ, ಅದನ್ನು 4 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದ. ಅಲ್ಲದೇ ತಾನು ತಯಾರಿಸಿದ ಈ ನಕಲಿ ಔಷಧಿಯನ್ನು ಕೆಲವು ಮೆಡಿಕಲ್ ರೆಪ್ರಸೆಂಟ್‌ಗಳ ಮೂಲಕ ಸಾರ್ವಜನಿಕರು ಹಾಗೂ ಆಸ್ಪತ್ರೆಗೂ ಸರಬರಾಜು ಮಾಡಿಸುತ್ತಿದ್ದ ಎಂಬ ಆರೋಪವೂ ಇದೆ. 

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ರೆಮ್ಡೆಸಿವಿರ್ ಔಷಧಿಯು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ತನಿಖೆ ನಡೆಸುವಾಗ ಈ ನಕಲಿ ಜಾಲ ಪತ್ತೆಯಾಗಿದೆ" ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ. 

ಆರೋಪಿ ಗಿರೀಶ್ ಕಳೆದ 11 ವರ್ಷದಿಂದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಸ್ಟಾಫ್‌ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದ. ಖಾಲಿಯಾಗಿದ್ದ ರೆಮ್ಡಿಸಿವಿರ್‌ ಔಷಧದ ಬಾಟಲಿಗೆ ಬೇರೆ ಔಷಧಿ ತುಂಬಿ ಅದನ್ನೇ ರೆಮ್ಡಿಸಿವಿರ್‌ ಔಷಧಿ ಎಂದು ಮಾರಾಟ ಮಾಡುತ್ತಿದ್ದ.  ನಕಲಿ ಔಷಧಿಯನ್ನು ಮೆಡಿಕಲ್‌ ರೆಪ್‌ಗಳಾಗಿದ್ದ ಪ್ರಶಾಂತ್ ಮತ್ತು ಮಂಜುನಾಥ್ ಎಂಬುವವರ ಜೊತೆ ಸೇರಿ ಮಾರಾಟ ಮಾಡುತ್ತಿದ್ದ ಎನ್ನುವುದು ತನಿಖೆಯಿಂದ ಗೊತ್ತಾಗಿದೆ.

ಗಿರೀಶ್ ವಿರುದ್ಧ ಐಪಿಸಿ ಸೆಕ್ಷನ್ 276, 420, 34 ರ ಅಡಿಯಲ್ಲಿ ಮತ್ತು ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಡ್ರಗ್ ಅಂಡ್ ಕಾಸ್ಮೆಟಿಕ್ಸ್ ಆಕ್ಟ್ 1940 ರ ಕಾಲಮ್ 27 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT