ಸಾಂದರ್ಭಿಕ ಚಿತ್ರ 
ರಾಜ್ಯ

ಯಾದಗಿರಿ: ಶಹಾಪುರ ಬಳಿ ಭೀಕರ ಅಪಘಾತ, ಐವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವು

ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ನಡೆದಿದೆ.

ಯಾದಗಿರಿ: ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಅಯ್ಯಮ್ಮ (60), ಶರಣಮ್ಮ (40), ಕಾಸೀಂಬೀ (40), ಭೀಮಬಾಯಿ (40) ಮತ್ತು ದೇವಿಂದ್ರಮ್ಮ (70) ಎಂದು ಗುರುತಿಸಲಾಗಿದ್ದು, ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾಗಿದ್ದಾರೆ.

ಮುನಮುಟಗಿ ಗ್ರಾಮದಿಂದ ಟಂಟಂನಲ್ಲಿ 10 ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಳ್ಳೂರು ಬಳಿಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT