ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ 
ರಾಜ್ಯ

ಆಕ್ಸಿಜನ್ ಕೊರತೆ ನೀಗಿಸಲು ಸ್ಟೀಲ್ ಕಂಪೆನಿಗಳಿಂದ ಆಕ್ಸಿಜನ್ ಪಡೆಯಲು ನಿರ್ಧಾರ: ಮುರುಗೇಶ್ ನಿರಾಣಿ

ರಾಜ್ಯದಲ್ಲಿ ಕೊರೋನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಅವರು ಬುಧವಾರ ಸ್ಟೀಲ್ ಕಂಪನಿಗಳ ಜೊತೆ ಸಭೆ ನಡೆಸಿದರು.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಅವರು ಬುಧವಾರ ಸ್ಟೀಲ್ ಕಂಪನಿಗಳ ಜೊತೆ ಸಭೆ ನಡೆಸಿದರು.

ಇಂದು ವಿಕಾಸಸೌಧಲ್ಲಿ ನಡೆದ ಸಭೆಯಲ್ಲಿ ಸ್ಟೀಲ್ ಕಂಪನಿಗಳಿಂದ ಆಕ್ಸಿಜನ್ ಪಡೆಯುವ ಬಗ್ಗೆ ಚರ್ಚಿಸಿ ಗಣಿಗಾರಿಕೆಗೆ ಉಪಯೋಗವಾಗುವ ಆಕ್ಸಿಜನ್ ಬಳಸಿಕೊಳ್ಳಲು ನಿರ್ಧರಿಸಲಾಯಿತು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮರುಗೇಶ್ ನಿರಾಣಿ, ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವುದರಿಂದ ಆಕ್ಸಿಜನ್ ಕೊರತೆ ಕಂಡುಬಂದಿದೆ. ಪ್ರಸ್ತುತ ಜಿಂದಾಲ್ ನಿಂದ 400 ಟನ್ ಆಕ್ಸಿಜನ್ ಸಿಗುತ್ತಿದೆ. ಬೇರೆ ಸ್ಟೀಲ್ ಪ್ಲಾಂಟ್ ನವರಿಂದ 200 ಟನ್ ಸಿಗಲಿದ್ದು, ಒಟ್ಟು 600 ಟನ್ ಪ್ರತಿದಿನ ಆಕ್ಸಿಜನ್ ಸಿಗಲಿದೆ. ನಮ್ಮ ರಾಜ್ಯಕ್ಕೆ ಪ್ರತಿದಿನ 600 ಟನ್ ಆಕ್ಸಿಜನ್ ಸಾಕಾಗಲಿದೆ ಎಂದರು.

ಬಲ್ಡೋಟಾ ಗಣಿ ಕಂಪನಿ ಬಂದ್ ಮಾಡಿದ್ದರಿಂದ ಈಗ ಅನಿವಾರ್ಯವಾಗಿ ನಮಗೆ ಆಕ್ಸಿಜನ್ ಬೇಕಾಗಿದೆ. ಹಾಗಾಗಿ ಅವರಿಗೆ ಮರುಪ್ರಾರಂಭಿಸುವಂತೆ ಸೂಚಿಸಿದ್ದೇವೆ. ಪ್ರಸ್ತುತ ಸಿಗುತ್ತಿದ್ದ ಆಕ್ಸಿಜನ್ ಕೈಗಾರಿಕೆಗೆ ಸಾಕಾಗುತ್ತಿತ್ತು. ಜೆಎಸ್ ಡಬ್ಲ್ಯೂ ಸ್ಟೀಲ್ ಕಂಪನಿ ಜೊತೆಗೆ ಬೇರೆ ಸ್ಟೀಲ್ ಕಂಪನಿಗಳ ಜೊತೆಯೂ ಸಭೆ ನಡೆಸಿ ಆಕ್ಸಿಜನ್ ಉತ್ಪಾದಿಸಲು ಸೂಚಿಸಲಾಗಿದೆ ಎಂದರು.

ರೋಗಿಗಳ ಸಂಖ್ಯೆ ಹೆಚ್ಚಾದರೆ ಆಕ್ಸಿಜನ್ ಪ್ರಮಾಣವೂ ಹೆಚ್ಚು ಬೇಕಾಗುತ್ತದೆ. ಎಷ್ಟು ಬೇಕು ಎಂಬುದರ ಬಗ್ಗೆ ನಿಖರವಾದ ಮಾಹಿತಿಯಿಲ್ಲ. ಈ ಬಗ್ಗೆ ಆರೋಗ್ಯ ಸಚಿವರ ಜೊತೆ ಚರ್ಚಿಸಬೇಕು. ನಾನೇ ಖುದ್ದು ಅಕ್ಸಿಜನ್ ವಿಚಾರದಲ್ಲಿ ಮುಂದೆ ಬಂದಿದ್ದೇನೆ. ಮುಂದೆ ಬಂದು ಸ್ಟೀಲ್ ಕಂಪನಿಗಳ ಜೊತೆ ಚರ್ಚಿಸಿರುವುದಾಗಿ ಮುರುಗೇಶ್ ನಿರಾಣಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!