ಗ್ರಾಹಕರಿಲ್ಲದೇ ಬಣಗುಡುತ್ತಿರುವ ಹೊಟೆಲ್ 
ರಾಜ್ಯ

ಕೋವಿಡ್-19: ಬೆಂಗಳೂರಿಗೆ ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ!

ಕೋವಿಡ್-19ನ ಅಲೆಯ ಬಿಗಿ ಹಿಡಿತದಲ್ಲಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪರಿಸ್ಥಿತಿ ಸುಧಾರಿಸಲು ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ ಎಂದು ಹೊಟೆಲ್ ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಕೋವಿಡ್-19ನ ಅಲೆಯ ಬಿಗಿ ಹಿಡಿತದಲ್ಲಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪರಿಸ್ಥಿತಿ ಸುಧಾರಿಸಲು ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ ಎಂದು ಹೊಟೆಲ್ ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ಹೊಡೆತಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೊಟೆಲ್ ಉದ್ಯಮ ವ್ಯಾಪಕ ಹಿನ್ನಡೆ ಅನುಭವಿಸಿದ್ದು, ಸರ್ಕಾರ ವಿಧಿಸಿರುವ ನೈಟ್ ಕರ್ಫ್ಯೂಯಿಂದಾಗಿ ಉದ್ಯಮದ ವಹಿವಾಟು ಶೇ.95ರಷ್ಟು ಕುಸಿತ ಕಂಡಿದೆ. ಹೀಗಾಗಿ ನಗರದಲ್ಲಿ ಅಲ್ಪಾವಧಿಯ ಲಾಕ್ಡೌನ್ ಜಾರಿಗೆ ತಂದು ಪರಿಸ್ಥಿತಿ ಸುಧಾರಿಸಬೇಕು ಎಂದು ರೆಸ್ಟೋರೆಂಟ್‌ಗಳು, ಪಬ್‌ಗಳು ಮತ್ತು ಬಾರ್‌ಗಳ ಮಾಲೀಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಏಪ್ರಿಲ್ 10 ರಿಂದ ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದಾಗಿನಿಂದ ವ್ಯವಹಾರಗಳು ಶೇ.95 ರಷ್ಟು ವ್ಯವಹಾರ ಕುಸಿದಿದೆ. ಇನ್ನು ಅಬಕಾರಿ ಇಲಾಖೆಯ ಪೂರ್ವಾನುಮತಿ ಇಲ್ಲದೆ ಪಬ್‌ಗಳು ಮತ್ತು ಬಾರ್‌ಗಳು ವ್ಯವಹಾರವನ್ನು ಮುಚ್ಚಲು ಸಾಧ್ಯವಿಲ್ಲ ಎಂದು ಜನಪ್ರಿಯ ಪಬ್‌ ವ್ಯಾಟ್ಸನ್‌ನ ಅಮಿತ್ ರಾಯ್ ಹೇಳಿದ್ದಾರೆ.

"ಮಾರ್ಚ್ ಎರಡನೇ ವಾರದಿಂದ ಅನೇಕ ಪಬ್‌ಗಳು ಮತ್ತು ಬಾರ್‌ಗಳಲ್ಲಿನ ಗ್ರಾಹಕರ ಸಂಖ್ಯೆ ಗಣನೀಯವಾಗಿ ಕುಸಿತ ಕಾಣಲು ಆರಂಭಿಸಿದೆ. ಇದೀಗ ಅವುಗಳಲ್ಲಿ ಹೆಚ್ಚಿನ ಪಬ್‌ಗಳು ಗ್ರಾಹಕರಿಲ್ಲದೇ ಖಾಲಿ ಹೊಡೆಯುತ್ತಿವೆ. ಜನರು ತಮ್ಮ ಆರೋಗ್ಯ ಮತ್ತು ಕುಸಿಯುತ್ತಿರುವ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ  ಭಯಭೀತರಾಗಿದ್ದಾರೆ. ಈ ಸಂದರ್ಭಗಳಲ್ಲಿ ವ್ಯವಹಾರ ನಡೆಸುವುದು ಕಷ್ಟಕರವಾಗುತ್ತಿದೆ. ಹೀಗಾಗಿ ತಾತ್ಕಾಲಿಕ ಲಾಕ್ಡೌನ್ ಅನ್ನು ಸರ್ಕಾರ ಘೋಷಿಸುವುದು ಉತ್ತಮ. ಇದು ಹೆಚ್ಚುತ್ತಿರುವ ಪ್ರಕರಣಗಳ ಸರಪಳಿಯನ್ನು ಮುರಿಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿರುವ ಎಬೊನಿ ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕ ರಾಜೇಶ್ ರಾಜಾರಾಮ್ ಅವರು, ತಮ್ಮ ಬಾರ್ ಮತ್ತು ರೆಸ್ಟೋರೆಂಟ್ 13 ನೇ ಮಹಡಿಯಲ್ಲಿದೆ. ಗ್ರಾಹಕರು ಮಾತ್ರವಲ್ಲದೇ ನಮ್ಮ ಸಿಬ್ಬಂದಿಗಳೂ ಕೂಡ ಸೋಂಕಿಗೆ ತುತ್ತಾಗುವು ಭೀತಿ ಇದೆ. ನಗರದಲ್ಲಿ ಈಗಾಗಲೇ ಬೆಡ್ ಗಳ  ಅಭಾವ ವ್ಯಾಪಕವಾಗಿದ್ದು, ತಮ್ಮ ಸಿಬ್ಬಂದಿ ಸೋಂಕಿಗೆ ತುತ್ತಾಗಿ ಆಸ್ಪತ್ರೆಗಳಲ್ಲಿ ಸಂಕಷ್ಟ ಅನುಭವಿಸುವುದನ್ನು ತಾವು ಬಯಸುವುದಿಲ್ಲ. ಹೀಗಾಗಿ ತಮ್ಮ ರೆಸ್ಟೋರೆಂಟ್ ಬಂದ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT