ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಐಸಿಯು ಸಾವಿನ ಪ್ರಮಾಣ 15 ದಿನಗಳಲ್ಲಿ ಶೇ.8.72ಕ್ಕೆ ಏರಿಕೆ!

ರಾಜ್ಯದಲ್ಲಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ಕೇವಲ 15 ದಿನಗಳಲ್ಲಿ ಐಸಿಯು ಸಾವಿನ ಪ್ರಮಾಣ ಶೇ.8.72ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ಕೇವಲ 15 ದಿನಗಳಲ್ಲಿ ಐಸಿಯು ಸಾವಿನ ಪ್ರಮಾಣ ಶೇ.8.72ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. 

ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ 15 ದಿನಗಳಲ್ಲಿ ಆಸ್ಪತ್ರೆಗೆ ದಾಖಲಾದ 1,239 ರೋಗಿಗಳ ಪೈಕಿ ಐಸಿಯುವಿನಲ್ಲಿ 108 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 1,239 ರೋಗಿಗಳ  ಶೇ. 39.95 (495) ಮಂದಿ ದೀರ್ಘಕಾಲಿಕ ರೋಗದಿಂದ ಬಳಲುತ್ತಿದ್ದು, ಶೇ.6.05 (744) ಮಂದಿ ಯಾವುದೇ ದೀರ್ಘಕಾಲಿಕ ರೋಗದಿಂದ ಬಳಲುತ್ತಿಲ್ಲ. ಸಾವನ್ನಪ್ಪಿರುವ 108 ಮಂದಿಯಲ್ಲಿ 61 ಮಂದಿ ದೀರ್ಘಕಾಲಿಕ ರೋಗದಿಂದ ಬಳಲುತ್ತಿದ್ದರು ಎಂದು ವರದಿಗಳು ತಿಳಿಸಿವೆ. 

ಬೀದರ್ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಐಸಿಯುವಿನಲ್ಲಿ 84 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ 21 ಮಂದಿ ದೀರ್ಘಕಾಲಿಕ ರೋಗದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
 
ಇನ್ನು ಬೆಂಗಳೂರಿನಲ್ಲಿ ಕಳೆದ 15 ದಿನಗಳಲ್ಲಿ 261 ಮಂದಿ ಐಸಿಯುವಿಗೆ ದಾಖಲಾಗಿದ್ದು, ಇದರಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ 11 ಮಂದಿ ದೀರ್ಘಕಾಲಿಕ ರೋಗದಿಂದ ಬಳಲುತ್ತಿದ್ದವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

ಕೊಲಂಬಿಯಾ ಏಷ್ಯಾದ ತುರ್ತುನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯ ಪ್ರದೀಪ್ ರಂಗಪ್ಪ ಅವರು ಮಾತನಾಡಿ, ಲಸಿಕೆ ಪಡೆದ ಹಿರಿಯ ನಾಗರೀಕರ ಮೇಲೆ ಕೊರೋನಾ ಪರಿಣಾಮ ಅಷ್ಟಾಗಿ ಬೀರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಐಸಿಯುವಿದೆ 40-50 ವರ್ಷದೊಳಗಿನ ಹೆಚ್ಚಾಗಿ ದಾಖಲಾಗುತ್ತಿದ್ದಾರೆಂದು ಹೇಳಿದ್ದಾರೆ. 

28-30 ವರ್ಷದವರೂ ಕೂಡ ಐಸಿಯುವಿಗೆ ದಾಖಲಾಗುತ್ತಿದ್ದಾರೆ. ಜ್ವರ ಬಂದ ಕೂಡಲೇ ಜನರು ಆಸ್ಪತ್ರೆಗೆ ದಾಖಲಾಗಬಾರದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಅತೀವ್ರ ಕೆಮ್ಮು, ಉಸಿರಾಟ ಸಮಸ್ಯೆ ಎದುರಾದರೆ ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT