ಸಂಗ್ರಹ ಚಿತ್ರ 
ರಾಜ್ಯ

24 ಗಂಟೆಗಳಲ್ಲಿ ಕೋವಿಡ್ ಆರ್​ಟಿ-ಪಿಸಿಆರ್ ವರದಿ ಒದಗಿಸಿ; ಲ್ಯಾಬ್ ಗಳಿಗೆ ರಾಜ್ಯ ಸರ್ಕಾರ ಸೂಚನೆ

ಸ್ಯಾಂಪಲ್ ಸಂಗ್ರಹಿಸಿದ 24 ಗಂಟೆಗಳಲ್ಲಿ ಕೋವಿಡ್ ಆರ್​ಟಿ-ಪಿಸಿಆರ್ ವರದಿ ನೀಡಬೇಕೆಂದು ರಾಜ್ಯದ ಎಳ್ಲಾ ಲ್ಯಾಬ್ ಗಳು ಹಾಗೂ ಪರೀಕ್ಷಾ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬುಧವಾರ ಸೂಚನೆ ನೀಡಿದೆ.

ಬೆಂಗಳೂರು: ಸ್ಯಾಂಪಲ್ ಸಂಗ್ರಹಿಸಿದ 24 ಗಂಟೆಗಳಲ್ಲಿ ಕೋವಿಡ್ ಆರ್​ಟಿ-ಪಿಸಿಆರ್ ವರದಿ ನೀಡಬೇಕೆಂದು ರಾಜ್ಯದ ಎಳ್ಲಾ ಲ್ಯಾಬ್ ಗಳು ಹಾಗೂ ಪರೀಕ್ಷಾ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬುಧವಾರ ಸೂಚನೆ ನೀಡಿದೆ. 

ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಕೊವಿಡ್ ಆರ್​ಟಿ-ಪಿಸಿಆರ್ ಪರೀಕ್ಷೆಗಾಗಿ ಮಾದರಿ ಸಂಗ್ರಹಿಸಿದ ಬಳಿಕ ಪರೀಕ್ಷಾ ಫಲಿತಾಂಶವನ್ನು ಅತಿ ಶೀಘ್ರದಲ್ಲಿ ಪ್ರಕಟಿಸಬೇಕು. ಪರೀಕ್ಷೆಯ ವರದಿಯನ್ನು 24 ಗಂಟೆಯೊಳಗೆ ನೀಡುವಂತೆ ಸೂಚನೆ ನೀಡಿತ್ತು. ಅಲ್ಲದೇ, ಪರೀಕ್ಷಾ ಮಾಹಿತಿಯನ್ನು 24 ಗಂಟೆಗಳ ಅವಧಿಯೊಳಗಾಗಿ ICMR ಪೋರ್ಟಲ್​ನಲ್ಲಿ ನಮೂದಿಸಬೇಕು ಎಂದು ಆದೇಶಿಸಿತ್ತು. 

ಪರೀಕ್ಷಾ ವರದಿಗಳನ್ನು ತಡವಾಗಿ ನೀಡಲಾಗುತ್ತಿದೆ ಎಂದು ಸಾಕಷ್ಟು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್ ಈ ನಿರ್ದೇಶನ ನೀಡಿತ್ತು ಎಂದು ಮೂಲಗಳು ತಿಳಿಸಿವೆ.
 
ಹೈಕೋರ್ಟ್ ಆದೇಶದ ಬೆನ್ನಲ್ಲೇ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತರ್ ಅವರು ಎಲ್ಲಾ ಪ್ರಯೋಗಾಲಯಗಳು ಹಾಗೂ ಪರೀಕ್ಷಾ ಸಂಸ್ಥೆಗಳಿಗೆ ಸ್ಯಾಂಪಲ್ ಸಂಗ್ರಹಿಸಿದ 24 ಗಂಟೆಗಳಲ್ಲಿ ಕೋವಿಡ್ ಆರ್​ಟಿ-ಪಿಸಿಆರ್ ವರದಿ ನೀಡಬೇಕೆಂದು ಸೂಚಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT