ಸಂಗ್ರಹ ಚಿತ್ರ 
ರಾಜ್ಯ

ಖಾಸಗಿ ಭೂಮಿಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೆ ರಾಜ್ಯ ಸರ್ಕಾರ ಅನುಮತಿ

ಕೋವಿಡ್-19 ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾದ ನಂತರ, ಕರ್ನಾಟಕ ಸರ್ಕಾರವು ಕೋವಿಡ್ ನಿಂದ ಮೃತಪಟ್ಟವರ ಶವಗಳನ್ನು ಮೃತಪಟ್ಟವರ ಸಂಬಂಧಿಕರ ಒಡೆತನದ ಖಾಸಗಿ ಭೂಮಿಯಲ್ಲಿ ಹೂಳಲು ಅಥವಾ ಸುಡಲು ಅನುಮತಿಸಿದೆ.

ಬೆಂಗಳೂರು: ಕೋವಿಡ್-19 ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾದ ನಂತರ, ಕರ್ನಾಟಕ ಸರ್ಕಾರವು ಕೋವಿಡ್ ನಿಂದ ಮೃತಪಟ್ಟವರ ಶವಗಳನ್ನು ಮೃತಪಟ್ಟವರ ಸಂಬಂಧಿಕರ ಒಡೆತನದ ಖಾಸಗಿ ಭೂಮಿಯಲ್ಲಿ ಹೂಳಲು ಅಥವಾ ಸುಡಲು ಅನುಮತಿಸಿದೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿದ ಹೊಸ ಸುತ್ತೋಲೆಯ ಪ್ರಕಾರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವವರು ಮಾಸ್ಕ್ ಗಳನ್ನು ಧರಿಸಬೇಕು.ತರ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಸತ್ತವರನ್ನು ಸ್ಪರ್ಶಿಸಲು ಅಗತ್ಯವಿರುವವರು ಪೂರ್ಣ ಪಿಪಿಇ ಕಿಟ್ ಮತ್ತು ಕೈಗವಸುಗಳನ್ನು ಧರಿಸುವುದು ಕಡ್ಡಾಯವಾಗಿದೆ.

ಕೋವಿಡ್ ಮೃತ ದೇಹಗಳನ್ನು ಸಾಗಿಸಲು ಬಳಸುವ ವಾಹನವನ್ನು ಶೇಕಡಾ ಒಂದು ಸೋಡಿಯಂ ಹೈಪೋಕ್ಲೋರೈಟ್ ದ್ರಾವಣವನ್ನು ಬಳಸಿ ಸೋಂಕುರಹಿತಗೊಳಿಸಬೇಕಾಗುತ್ತದೆ, ಇದನ್ನು ಸಾಮಾನ್ಯವಾಗಿ ಬ್ಲೀಚ್ ಎಂದು ಕರೆಯಲಾಗುತ್ತದೆ.

ರೋಗಿಯು ಮೃತಪಟ್ಟ ಸ್ಥಳವನ್ನು ಹೊರತುಪಡಿಸಿ ಅಂತಹ ಮೃತ ದೇಹವನ್ನು ಸಾಗಿಸುವ ಸಂದರ್ಭದಲ್ಲಿ, ಸರಿಯಾಗಿ ಸಹಿ ಮಾಡಿದ ಪ್ರಮಾಣಪತ್ರವನ್ನು ಕೊಂಡೊಯ್ಯುವಂತಹ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಶವದೊಡನೆ ತೆರಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ಸುಪ್ರೀಂಕೋರ್ಟ್ ನಲ್ಲಿ ತಮ್ಮತ್ತ ಶೂ ಎಸೆದಿದ್ದವನಿಗೆ ಕ್ಷಮೆ ನೀಡಿದ CJI

SCROLL FOR NEXT