ಜಗದೀಶ್ ಶೆಟ್ಟರ್ 
ರಾಜ್ಯ

ಮೆಡಿಕಲ್ ಆಕ್ಸಿಜನ್ ಕೊರತೆ: ಉಕ್ಕಿನ ಕಾರ್ಖಾನೆಗಳ ಜೊತೆ ಶೆಟ್ಟರ್, ಮುರುಗೇಶ್ ನಿರಾಣಿ ಸಭೆ

ರಾಜ್ಯದಲ್ಲಿ ತಲೆದೋರಿರುವ ಆಮ್ಲಜನಕ ಕೊರತೆ ಸರಿದೂಗಿಸಲು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ಬುಧವಾರ ಉಕ್ಕು ತಯಾರಿಕಾ ಕಾರ್ಖಾನೆಗಳ ಜೊತೆ ಸಭೆ ನಡೆಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಆಮ್ಲಜನಕ ಕೊರತೆ ಸರಿದೂಗಿಸಲು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ಬುಧವಾರ ಉಕ್ಕು ತಯಾರಿಕಾ ಕಾರ್ಖಾನೆಗಳ ಜೊತೆ ಸಭೆ ನಡೆಸಿದ್ದಾರೆ.

ಜೆಎಸ್ ಡಬ್ಲ್ಯೂ ಮಂಗಳವಾರ ಪ್ರತಿದಿನ 400 ಟನ್ ಆಕ್ಸಿಜನ್ ಪೂರೈಕೆ ಮಾಡುವುದಾಗಿ ತಿಳಿಸಿದ ನಂತರ, ಬಲ್ದೋಟಾ, ಜಿಂದಾಲ್ ಸೇರಿದಂತೆ ಹಲವು ಉಕ್ಕಿನ ಕಾರ್ಖಾನೆಗಳು ಮೆಡಿಕಲ್ ಆಕ್ಸಿಜನ್ ಉತ್ಪಾದನೆ ಮಾಡುವುದಾಗಿ ತಿಳಿಸಿವೆ.

ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ಸಂಬಂಧ ರಾಜ್ಯ ಸರ್ಕಾರ ಹಲವು ಕ್ರಮ ಕೈಗೊಳ್ಳುತ್ತಿದೆ,  ಆಕ್ಸಿಜನ್ ಪೂರೈಕೆಗೆ ಕಾರ್ಖಾನೆಗಳು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಉಕ್ಕಿನ ಕೈಗಾರಿಕೆಗಳು ದ್ರವೀಕೃತ ಆಮ್ಲಜನಕವನ್ನು ತಮ್ಮ ಘಟಕಗಳಲ್ಲಿ ಬಳಸಿಕೊಂಡು ತಯಾರಿಸುತ್ತವೆ.ಈ ಸರಬರಾಜುಗಳನ್ನು ಆದ್ಯತೆಯ ಆಧಾರದ ಮೇಲೆ ಆಸ್ಪತ್ರೆಗಳಿಗೆ ನೀಡಲು  ಸೂಚನೆ ನೀಡಲಾಗಿದೆ.

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಆಸ್ಪತ್ರೆಗಳಿಗೆ ಪೂರೈಸಲು ಅವರು ಒಪ್ಪಿದ್ದಾರೆ. ಇದು ಆಮ್ಲಜನಕದ ಅಗತ್ಯವಿರುವ ಮತ್ತು ಐಸಿಯುಗಳಲ್ಲಿರುವ ಅನೇಕ ರೋಗಿಗಳನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಅಗತ್ಯವಿರುವ ಆಮ್ಲಜನಕದ ಪ್ರಮಾಣವನ್ನು ಪತ್ತೆ ಹಚ್ಚಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ನಿರಾಣಿ ಹೇಳಿದ್ದಾರೆ. ಸಾಂಕ್ರಾಮಿಕ ರೋಗದ ವಿರುದ್ಧದ ಈ ಹೋರಾಟದಲ್ಲಿ ಎಲ್ಲರೂ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT