ಆಸ್ಪತ್ರೆಯಲ್ಲಿರುವ ಸಾಲುಮರದ ತಿಮ್ಮಕ್ಕ 
ರಾಜ್ಯ

ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಪದ್ಮಶ್ರೀ ವಿಜೇತೆ ಸಾಲುಮರದ ತಿಮ್ಮಕ್ಕ

ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ.

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರು ಇಂದು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ ಘಟನೆ ವರದಿಯಾಗಿದೆ. 

ಬೆನ್ನು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಅಪೋಲೋ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಆಸ್ಪತ್ರೆ ತುಂಬಾ ಕೊರೋನಾ ರೋಗಿಗಳು ತುಂಬಿ ಹೋಗಿರುವುದರಿಂದ ನಾನ್ ಕೋವಿಡ್ ರೋಗಿಗಳಿಗೆ ಹಾಸಿಗೆ ಸಮಸ್ಯೆ ಎದುರಾಗಿದೆ. 

ಸಾಲುಮರದ ತಿಮ್ಮಕ್ಕ ಸಹ ಹಾಸಿಗೆಗಾಗಿ ಎರಡು ಗಂಟೆಗಳ ಕಾಲ ಪರದಾಟ ನಡೆಸಬೇಕಾಯಿತು. ಇನ್ನು ತಿಮ್ಮಕ್ಕ ಅವರಿಗೆ ಬೆಡ್ ಹೊಂದಿಸಲು ವೈದ್ಯರು ಸಹ ಪ್ರಯತ್ನಿ ನಡೆಸಿದ್ದರು. ನಂತರ ಅವರಿಗೆ ಹಾಸಿಗೆ ಹೊಂದಿಸಿ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.  

ಈ ಹಿಂದೆ ಬಚ್ಚಲುಮನೆಯಲ್ಲಿ ಬಿದ್ದು ಬೆನ್ನುಮೂಳೆ ಮುರಿತವಾಗಿದ್ದ ತಿಮ್ಮಕ್ಕ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದೀಗ ಅದೇ ಜಾಗದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಬಿ ಜಿ ರಾಮ್ ಜಿಯಿಂದ 16.12 ಕೋಟಿ ಜನ ನಿರುದ್ಯೋಗಿಗಳು; ಮನರೇಗಾ ಮರುಜಾರಿಗೊಳಿಸುವವರೆಗೆ ಹೋರಾಟ

ತಮಿಳುನಾಡಿನಲ್ಲಿ SIR: ಅಂತಿಮ ಪಟ್ಟಿ ಬಿಡುಗಡೆ; 74 ಲಕ್ಷ ಮತದಾರರ ಹೆಸರು ಡಿಲೀಟ್

ಸಭೆಯಿಂದ ಎದ್ದು ಹೋಗ್ತೀನೀ?: SC-STಗೆ ಅನ್ಯಾಯ; ಸಚಿವ ಸಂತೋಷ್ ಲಾಡ್ ಮುಂದೆ Congress MLC ಗುಡುಗು, Video!

ನಿಮ್ಮ ಜಿಮ್‌ಗೆ ಸೇರುತ್ತೇನೆ: ಟ್ರೈನರ್ ‘ಮೊಹಮ್ಮದ್ ದೀಪಕ್‌’ ಭೇಟಿಯಾದ ರಾಹುಲ್ ಗಾಂಧಿ

ಬಾಂಗ್ಲಾದೇಶ ಮುಳುಗಿಸುವ ಯೋಜನೆ, ಅಸ್ಥಿರತೆ ಸೃಷ್ಟಿಗೆ ಯತ್ನಿಸಿದ್ದ ನೊಬೆಲ್ ಯೂನಸ್: ಅಧ್ಯಕ್ಷರಿಂದ ಸ್ಫೋಟಕ ಮಾಹಿತಿ ಬಹಿರಂಗ!

SCROLL FOR NEXT