ಮದುವೆಗೆ ಬಂದ ಅತಿಥಿಗಳನ್ನು ಪೊಲೀಸರು ಕಳುಹಿಸಿದ ನಂತರ ಖಾಲಿಯಾದ ಕಲ್ಯಾಣ ಮಂಟಪ 
ರಾಜ್ಯ

ಕೊರೋನಾ ಮಾರ್ಗಸೂಚಿ ಎಫೆಕ್ಟ್: ಕಾರವಾರದಲ್ಲಿ ಮದುವೆಗೆ ಹೋದ ಅತಿಥಿಗಳು ಊಟ ಮಾಡದೆ ವಾಪಸ್!

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶೇಜವಾಡದ ಸದಾನಂದ ಪ್ಯಾಲೇಜ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆಗಮಿಸಿದ್ದ ಅತಿಥಿಗಳನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ ಘಟನೆ ನಡೆದಿದೆ.

ಕೋವಿಡ್ ಮಾರ್ಗಸೂಚಿಯಂತೆ ಕಲ್ಯಾಣ ಮಂಟಪದಲ್ಲಿ ಮದುವೆ ದಿನ ಮಾಸ್ಕ್ ಧರಿಸಿ ಬಹುತೇಕರು ಸ್ಯಾನಿಟೈಸರ್ ಬಳಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯವರು ಮದುವೆ ಕಾರ್ಯಕ್ರಮ ನಡೆಸುತ್ತಿದ್ದರು. ಮಾಂಗಲ್ಯ ಧಾರಣೆ ಆಗಿ ಆರತಕ್ಷತೆ ನಡೆಯುತ್ತಿತ್ತು, ಆರತಕ್ಷತೆಗೆ ಸಾಕಷ್ಟು ಅತಿಥಿಗಳು ಬಂದಿದ್ದರು.

ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ 50 ಮಂದಿ ಮಾತ್ರ ಮದುವೆ ಕಾರ್ಯಕ್ರಮದಲ್ಲಿ ಸೇರಬೇಕು. ಅದಕ್ಕಿಂತ ಹೆಚ್ಚು ಜನರು ಇದ್ದ ಕಾರಣ ಕಲ್ಯಾಣ ಮಂಟಪದೊಳಗೆ ಪ್ರವೇಶಿಸಿದ ಪೊಲೀಸರು ಮತ್ತು ಅಧಿಕಾರಿಗಳು ಅತಿಥಿಗಳನ್ನು ಹೊರಗೆ ಕಳುಹಿಸಿದರು. ಕಕ್ಕಾಬಿಕ್ಕಿಯಾದ ಅತಿಥಿಗಳಲ್ಲಿ ಕೆಲವರು ಉಡುಗೊರೆ ನೀಡದೆ, ಊಟವನ್ನೂ ಮಾಡದೆ ಭಯದಿಂದ ಸಭಾಂಗಣದ ಹೊರಗೆ ಹೋದ ಪ್ರಸಂಗ ನಡೆಯಿತು.

ಸರ್ಕಾರದ ಮಾರ್ಗಸೂಚಿಗೂ ಮೊದಲೇ ಮದುವೆ ಆಮಂತ್ರಣ ಪತ್ರಿಕೆ ಹಂಚಿದ ಕಾರಣ ಅತಿಥಿಗಳು ಬಂದಿದ್ದಾರೆ. ಉಳಿದ ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸುತ್ತಿದ್ದೇವೆ ಎಂದು ಮದುವೆ ಮನೆಯವರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದರಿಂದ ಸ್ವಲ್ಪ ಹೊತ್ತಿನ ನಂತರ ಸಾಮಾಜಿಕ ಅಂತರ ಕಾಯ್ದುಕೊಂಡು ಉಡುಗೊರೆ ನೀಡಿ ಊಟ ಮಾಡಿ ಹೋಗಲು ಅವಕಾಶ ನೀಡಿದರು. ಆದರೆ ಕೆಲವರಿಗೆ ಮದುವೆ ಊಟ ಮಿಸ್ಸಾಗಿದ್ದಂತೂ ಹೌದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT