ಸ್ಫೋಟದ ಪರಿಣಾಮ: ಮಂಗಳೂರು ಎಸ್ಇಝೆಡ್ ನಲ್ಲಿರುವ ಕಂಪನಿಯಲ್ಲಿ ಅಗ್ನಿ ಅವಘಡ 
ರಾಜ್ಯ

ಸ್ಫೋಟದ ಪರಿಣಾಮ: ಮಂಗಳೂರು ಎಸ್ಇಝೆಡ್ ನಲ್ಲಿರುವ ಕಂಪನಿಯಲ್ಲಿ ಅಗ್ನಿ ಅವಘಡ

ಮಂಗಳೂರಿನ ಎಸ್ಇಝೆಡ್ ನಲ್ಲಿರುವ ಕಂಪನಿಯಲ್ಲಿ ಏ.24 ರಂದು ಅಗ್ನಿ ಅವಘಡ ಸಂಭವಿಸಿದೆ. 

ಮಂಗಳೂರು: ಮಂಗಳೂರಿನ ಎಸ್ಇಝೆಡ್ ನಲ್ಲಿರುವ ಕಂಪನಿಯಲ್ಲಿ ಏ.24 ರಂದು ಅಗ್ನಿ ಅವಘಡ ಸಂಭವಿಸಿದೆ. 

ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು, ಸ್ಫೋಟದ ಪರಿಣಾಮವಾಗಿ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಸ್ಫೋಟದ ಪರಿಣಾಮವಾಗಿ ದಟ್ಟ ಹೊಗೆ ಪ್ರದೇಶದಲ್ಲಿ ಆವರಿಸಿದ್ದು, ಕ್ಯಾಟಸಿಂತ್ ವಿಶೇಷ ರಾಸಾಯನಿಕಗಳ ಕಂಪನಿಯಲ್ಲಿ ಈ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಜೀವ ಹಾನಿ ಸಂಭವಿಸಿಲ್ಲ. 

ಡಿಸಿಪಿ ಹರಿರಾಮ್ ಶಂಕರ್ ಕಂಪನಿಯ ಬಗ್ಗೆ ಮಾಹಿತಿ ನೀಡಿದ್ದು ಪೆಟ್ರೋಲಿಯಂ ಉಪ ಉತ್ಪನ್ನಗಳನ್ನು ತಯಾರಿಸುವ ಸಂಸ್ಥೆಯಾಗಿತ್ತು ಎಂದು ಹೇಳಿದ್ದಾರೆ. ಕದ್ರಿ ಅಗ್ನಿಶಾಮಕ ಸೇವೆ, ಹೆಚ್ ಪಿಸಿಎಲ್, ಎಂಸಿಎಫ್ ಅಗ್ನಿ ಶಾಮಕಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ. ಲಾಕ್ ಡೌನ್ ಕಾರಣದಿಂದಾಗಿ ಹಲವು ಉದ್ಯೋಗಿಗಳು ಮನೆಯಲ್ಲಿದ್ದರು. ಆದ್ದರಿಂದ ಜೀವ ಹಾನಿ ಸಂಭವಿಸಿಲ್ಲ ಎಂದು ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT