ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಮೊದಲ ದಿನ ಸಂಪೂರ್ಣ ಯಶಸ್ವಿ

ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಉಲ್ಬಣವನ್ನು ತಡೆಯಲು ವಾರಾಂತ್ಯದ ಕರ್ಫ್ಯೂ ಹೇರಿದ್ದ ಮೊದಲ ದಿನ ಶಾಂತಿಯುತವಾಗಿಯೂ, ಸಂಪೂರ್ಣ ಯಶಸ್ವಿಯಾಗಿಯೂ ಮುಗಿದಿದೆ,

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಉಲ್ಬಣವನ್ನು ತಡೆಯಲು ವಾರಾಂತ್ಯದ ಕರ್ಫ್ಯೂ ಹೇರಿದ್ದ ಮೊದಲ ದಿನ ಶಾಂತಿಯುತವಾಗಿಯೂ, ಸಂಪೂರ್ಣ ಯಶಸ್ವಿಯಾಗಿಯೂ ಮುಗಿದಿದೆ.

ವರದಿಗಳ ಪ್ರಕಾರ, ಕಲಬುರಗಿಯಲ್ಲಿ ವ್ಯಾಪಾರ ಮಳಿಗೆಗಳು ಬಾಗಿಲು ಮುಚ್ಚಿದಂತೆ ರಸ್ತೆಗಳು ಬಿಕೋ ಎನ್ನುವ ನೋಟ ಕಾಣುತ್ತಿತ್ತು.

ಈಶಾನ್ಯ ರಸ್ತೆ ಸಾರಿಗೆ ನಿಗಮ (ಎನ್‌ಇಆರ್‌ಟಿಸಿ) ಕೇವಲ ನೆಪಮಾತ್ರದ ಸೇವೆಯನ್ನು ಮಾತ್ರ ನಿರ್ವಹಿಸುತ್ತಿತ್ತು,

ರಾಜ್ಯಾದ್ಯಂತ  ವ್ಯಾಪಾರ ಮಳಿಗೆಗಳು ಮುಚ್ಚಲ್ಪಟ್ಟವು, ಅಗತ್ಯ ಸೇವೆಗಳನ್ನು ಬೆಳಿಗ್ಗೆ 10 ಗಂಟೆಯ ನಂತರ ಸ್ಥಗಿತಗೊಳಿಸಲು ನಿಯಮಿಸಲಾಗಿತ್ತು. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಕೇವಲ ಪಾರ್ಸೆಲ್ ಸೇವೆಯನ್ನು ಮಾತ್ರ ಒದಗಿಸಿದವು ಮತ್ತು ಯಾರಿಗೂ ಕುಳಿತು ತಿನ್ನಲು ಅವಕಾಶವಿರಲಿಲ್ಲ. 

ಅಗತ್ಯ ಸೇವೆಗಳು ಮುಕ್ತವಾಗಿರುತ್ತವೆ ಎಂದು ಸರ್ಕಾರ ಘೋಷಿಸಿದ್ದರೂ, ಪೋಲಿಸ್ ವ್ಯಾನ್ ಸದ್ದು ಕೇಳುವ ಮುನ್ನವೇ ಜನರು ತಮ್ಮ ಖರೀದಿಯನ್ನು ಮುಗಿಸಿದ್ದರು. ಕೆಲವು ನಗರಗಳಲ್ಲಿ, ಹಾಲಿನ ಬೂತ್‌ಗಳು ಸಹ ಮುಚ್ಚಲ್ಪಟ್ಟವು.

ರಸ್ತೆಯಲ್ಲಿ ಸಾರ್ವಜನಿಕ ಸಾರಿಗೆ ಬಸ್ಸುಗಳು ಬಹಳ ಕಡಿಮೆ ಇದ್ದರೂ, ಯಾವುದೇ ಪ್ರಯಾಣಿಕರು ಇರಲಿಲ್ಲ.

ಪೊಲೀಸರ ಪ್ರಕಾರ ರಾಜ್ಯದ ಯಾವುದೇ ಭಾಗದಲ್ಲಿ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT