ಬಾಬುರಾವ್ ಚಿಂಚನಸೂರ್ 
ರಾಜ್ಯ

ಚೆಕ್ ಬೌನ್ಸ್ ಪ್ರಕರಣ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಖುಲಾಸೆ 

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಾಬು ರಾವ್ ಚಿಂಚನ್ಸೂರ್ ಅವರನ್ನು ನಗರ ನ್ಯಾಯಾಲಯ ಖುಲಾಸೆಗೊಳಿಸಿದೆ.

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಾಬು ರಾವ್ ಚಿಂಚನ್ಸೂರ್ ಅವರನ್ನು ನಗರ ನ್ಯಾಯಾಲಯ ಖುಲಾಸೆಗೊಳಿಸಿದೆ.

ಮಹಿಳೆಯೊಬ್ಬರಿಂದ ಬಾಬುರಾವ್ ಚಿಂಚನಸೂರು 11.88 ಕೋಟಿ ಸಾಲವಾಗಿ ಹಣ ಪಡೆದಿದ್ದರು, 2015ರ ಜುಲೈ ನಲ್ಲಿ ಅಂಜನಾ ಶಾಂತವೀರ್ ಎಂಬುವರು ಚಿಂಚನಸೂರ್ ವಿರುದ್ಧ
ಪ್ರಕರಣ ದಾಖಲಿಸಿದ್ದರು.

ನನ್ನಿಂದ ಹಣ ಪಡೆದಿರುವ ಚಿಂಚನಸೂರು ವಾರ್ಷಕವಾಗಿ ಶೇ.12 ರ ಬಡ್ಡಿ ದರದಲ್ಲಿ 12 ಕಂತುಗಳಲ್ಲಿ ಹಣ ನೀಡುವುದಾಗಿ ಹೇಳಿ ಹಣ ಪಡೆದಿದ್ದರು.,

ಪೂರ್ಣ ಸಾಲದ ಹಣಕ್ಕೆ 2015ರ ಏಪ್ರಿಲ್‌ 30ರ ದಿನಾಂಕ ನಮೂದಿಸಿ ಚೆಕ್‌ ನೀಡಿದ್ದರು. ಈ ಚೆಕ್‌ ಬೌನ್ಸ್‌ ಆಗಿತ್ತು. ಆನಂತರ, ಮಹಿಳೆ ಕೋರ್ಟ್‌ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಅದಾದ ನಂತರ ಚಿಂಚನಸೂರು ಅವರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿ, ತಮ್ಮ ಚೆಕ್ ಬುಕ್ ಕದ್ದಿರುವ ಮಹಿಳೆ ತಮ್ಮ ಸಹಿಯನ್ನು ನಕಲಿ ಮಾಡಿ ಬ್ಯಾಂಕ್ ಗೆ ಸಲ್ಲಿಸಿದ್ದಾರೆ ಎಂದು ದೂರು ದಾಖಲಿಸಿದ್ದರು. 

ಚುನಾಯಿತ ಸಂಸದರು / ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಗುರುವಾರ ಚಿಂಚನಸೂರ್ ಅವರನ್ನು ಖುಲಾಸೆಗೊಳಿಸಿದೆ.

ದಾಖಲೆಯಲ್ಲಿರುವ ಸಾಕ್ಷ್ಯಗಳನ್ನು ಗಮನಿಸಿದರೇ ದೂರುದಾರರ ಮೇಲೆ ಅನುಮಾನ ಬರುತ್ತದೆ, ಆರೋಪಿ ವಿರುದ್ಧ ದೂರುದಾರರು ಯಾವುದೇ ಸಮಂಜಸ ಆಧಾರ ಸಾಬೀತು ಪಡಿಸಲು ವಿಫಲವಾಗಿದ್ದಾರೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iris Dena ನಾವಿಕರ ಹತ್ಯೆ: ಡೆಡ್ಲಿ ಪ್ರತೀಕಾರಕ್ಕಾಗಿ ಕಾಯುತ್ತಿದ್ದೇವೆ, ಯಾವಾಗ, ಏನು ಎಂಬ ಗುಟ್ಟು ಬಿಟ್ಟುಕೊಡದ ಇರಾನ್!

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ, ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

Pakistan-Taliban Conflicts: ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; ಬೆಚ್ಚಿದ ಕಾಬುಲ್, 400 ಜನರು ಸಾವು, 250 ಗಾಯ

ಕಾಬೂಲ್ ನಲ್ಲಿ ವೈಮಾನಿಕ ದಾಳಿ: ಪಾಕ್ ಸೇನೆಯಿಂದ ಹತ್ಯೆ, ರಶೀದ್ ಖಾನ್ ಸೇರಿದಂತೆ ಅಪ್ಘನ್ ಕ್ರಿಕೆಟಿಗರ ಆಕ್ರೋಶ

ಗ್ಯಾಸ್ ಟ್ರಬಲ್ ಮಧ್ಯೆ ಕೊಂಚ ನಿರಾಳ: ಭಾರತಕ್ಕೆ ಬಂದಿಳಿದ ಎರಡು ತೈಲ ಹಡಗು, ಇಂದು ಮಂಗಳೂರು ತಲುಪಲಿದೆ 26 ಸಾವಿರ ಮೆಟ್ರಿಕ್ ಟನ್

SCROLL FOR NEXT