ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ 
ರಾಜ್ಯ

ಬೆಂಗಳೂರು: ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಹೊಸ ಒಪಿಡಿ ಸ್ಥಾಪನೆಗೆ ಕ್ರಮ- ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಭಾನುವಾರ ಬೆಳಗ್ಗೆ  ಕೆ.ಸಿ.ಜನರಲ್‌ ಆಸ್ಪತ್ರೆಯ ಕೋವಿಡ್‌ ಚಿಕಿತ್ಸಾ ಘಟಕಗಳಿಗೆ ಭೇಟಿ ಸೋಂಕಿತರ  ಯೋಗ ಕ್ಷೇಮ ವಿಚಾರಿಸಿದರು. 

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಭಾನುವಾರ ಬೆಳಗ್ಗೆ  ಕೆ.ಸಿ.ಜನರಲ್‌ ಆಸ್ಪತ್ರೆಯ ಕೋವಿಡ್‌ ಚಿಕಿತ್ಸಾ ಘಟಕಗಳಿಗೆ ಭೇಟಿ ಸೋಂಕಿತರ  ಯೋಗ ಕ್ಷೇಮ ವಿಚಾರಿಸಿದರು. 

ಪಿಪಿಎ ಕಿಟ್‌ ಧರಿಸಿ ಸೋಂಕಿತರನ್ನು ಭೇಟಿ ಮಾಡಿ ಮಾತನಾಡಿದ ಸಚಿವರು, ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಮಾಡ್ಯೂಲರ್‌ ಕೋವಿಡ್‌ ಐಸಿಯು ಘಟಕಗಳ ಒಳಕ್ಕೂ ತೆರಳಿ ಅಲ್ಲಿನ ವ್ಯವಸ್ಥೆಯನ್ನು  ಪರಿಶೀಲಿಸಿದರು.

 ಬಳಿಕ ಅವರು ಮಾತನಾಡಿ, ಕೆಸಿ ಜನರಲ್ ಆಸ್ಪತ್ರೆಯಲ್ಲಿ ಹೆಚ್ಚು ತಜ್ಞ ವೈದ್ಯರು ಕರ್ತವ್ಯ  ನಿರ್ವಹಿಸುತ್ತಿದ್ದು, ಅತ್ಯುತ್ತಮ ಸೌಲಭ್ಯಗಳು ಕೂಡ ಇವೆ. ಹೀಗಾಗಿ ಇಲ್ಲಿಯೇ ಇನ್ನೊಂದು  ದೊಡ್ಡ ಪ್ರಮಾಣದ ಹೊರ ರೋಗಿಗಳ ವಿಭಾಗ (ಒಪಿಡಿ)ವನ್ನು ತೆರೆಯಲು ಸರಕಾರ ನಿರ್ಧರಿಸಿದೆ ಎಂದು ಡಿಸಿಎಂ ಹೇಳಿದರು. 

ಈ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಖಾ ಎಂಬ ನರ್ಸ್‌ ಹೆಸರನ್ನು ಪ್ರಧಾನಿ  ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ʼಮನ್‌ ಕೀ ಬಾತ್‌ʼ ಭಾಷಣದಲ್ಲಿ ಪ್ರಸ್ತಾಪ  ಮಾಡಿದ್ದಾರೆ. ಇದು ಅತ್ಯಂತ ಸಂತೋಷದ ಸಂಗತಿ. ಅವರಿಗೆ ಸರಕಾರದ ಮೆಚ್ಚುಗೆ ಇದೆ.  ಹಾಗೆಯೇ ಆಸ್ಪತ್ರೆಯ ಎಲ್ಲ ವೈದ್ಯರು, ನರ್ಸ್‌ಗಳು ಹಾಗೂ ಪ್ಯಾರಾ ಮಡಿಕಲ್‌ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹೇಳಿದರು. 

ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕಿತರಿಗೆ ಹಾಸಿಗೆಗಳ ಕೊರತೆ ಇದೆ. ಅದನ್ನು ಇಲ್ಲ  ಎಂದು ಹೇಳುತ್ತಿಲ್ಲ. ಆದರೆ, ಆ ಸಮಸ್ಯೆಯನ್ನು ಬಗೆಹರಿಸಲು ಎಲ್ಲ ರೀತಿಯ ಪ್ರಯತ್ನವನ್ನು  ಮಾಡಲಾಗುತ್ತಿದೆ. ಒಂದು ವೇಳೆ ಬೆಡ್‌ ಸಿಗದಿದ್ದರೂ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಯಾರೇ  ಬಂದರೂ ಅವರನ್ನು ತಪಾಸಣೆ ಮಾಡಿ ಉತ್ತಮ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವೆ
 ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. 

ಈ ಆಸ್ಪತ್ರೆಯಲ್ಲಿ 450 ಬೆಡ್‌ ಇದೆ. ಸಾಕಾಗುತ್ತಿಲ್ಲ ನಿಜ, ಆದರೆ ದಿನಕ್ಕೆ ಕೊನೆಪಕ್ಷ 2,000 ಜನರಿಗೆ ಚಿಕಿತ್ಸೆ ಸಿಗುವ ವ್ಯವಸ್ಥೆ ಆಗಬೇಕು. ಅದಕ್ಕೆ ಅಗತ್ಯವಾದ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಒಪಿಡಿಗೆ ಬಂದು ಚಿಕಿತ್ಸೆ ಪಡೆದು ಮನೆಯಲ್ಲೇ ಹೋಮ್‌ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯಬಹುದು. ಉತ್ತಮ ಔಷಧಿಯನ್ನು ನೀಡಲಾಗುತ್ತಿದೆ. ರೋಗ ಲಕ್ಷಣಗಳಿದ್ದವರೆಲ್ಲ ಬಂದು ಆಸ್ಪತ್ರೆಗೆ ದಾಖಲಾಗಬೇಕು ಎಂದಲ್ಲ, ಮನೆಯಲ್ಲೇ ಇದ್ದು ಉತ್ತಮ ಚಿಕಿತ್ಸೆ 
ಪಡೆಯಬಹುದು ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ರೆಮಿಡಿಸ್ವಿರ್‌ ಕೊರತೆ ಬಹತೇಕ ನೀಗುತ್ತಿದೆ. ಕೇಂದ್ರ ಸರಕಾರದಿಂದ ಇವತ್ತು 1,50,000ಕ್ಕಿಂತ ಹೆಚ್ಚಿನ ರೆಮಿಡಿಸ್ವಿರ್‌ ವೇಲ್ಸ್‌ ರಾಜ್ಯಕ್ಕೆ ಹಂಚಿಕೆಯಾಗಿದೆ.ಇನ್ನು ಕೊರತೆಯಾಗಲ್ಲ, ಅಗತ್ಯ ಇರುವವರಿಗೆ ನೀಡಲಾಗುವುದು. ಅದಕ್ಕೆ ಎಲ್ಲ ಅಗತ್ಯ 
ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT