ಕೈದಿಗಳ ಮಾರಾಮಾರಿ ನಡೆದ ಮಂಗಳೂರು ಜೈಲು 
ರಾಜ್ಯ

ಮಂಗಳೂರು ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಇಬ್ಬರಿಗೆ ಗಾಯ

ಮಂಗಳೂರು ಜಿಲ್ಲಾ ಉಪ ಕಾರಾಗೃಹದಲ್ಲಿ ಕೈದಿಗಳ  ನಡುವೆ ಮಾರಾಮಾರಿ ನಡೆದಿದ್ದು ಕನಿಷ್ಠ ಇಬ್ಬರಿಗೆ ಗಾಯಗಳಾಗಿದೆ.

ಮಂಗಳೂರು: ಮಂಗಳೂರು ಜಿಲ್ಲಾ ಉಪ ಕಾರಾಗೃಹದಲ್ಲಿ ಕೈದಿಗಳ  ನಡುವೆ ಮಾರಾಮಾರಿ ನಡೆದಿದ್ದು ಕನಿಷ್ಠ ಇಬ್ಬರಿಗೆ ಗಾಯಗಳಾಗಿದೆ.

ಭಾನುವಾರ ಬೆಳಗಿನ ಉಪಹಾರದ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಸಮೀರ್ ಎಂದು ಗುರುತಿಸಲ್ಪಟ್ಟ ದರೋಡೆ-ಆರೋಪಿ ಸಹ ಕೈದಿಯಾಗಿದ್ದ ಅನ್ಸರ್ ಗೆ ಚಮಚ ಮತ್ತು ಇತರ ಅಡುಗೆ ಪಾತ್ರೆಗಳನ್ನು ಬಳಸಿ ಹಲ್ಲೆ ಮಾಡಿದ್ದ. ಆ ಜತೆಗೆ ಜೈನುದ್ದೀನ್ ಎಂದು ಗುರುತಿಸಲ್ಪಟ್ಟ ಕೈದಿಯನ್ನೂ ಗಾಯಗೊಳಿಸಿದ್ದಾನೆ.

ಅನ್ಸರ್ ಕೈ ಮತ್ತು ಕಾಲಿಗೆ ಗಾಯವಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿದೆ.

ಕಳೆದ ಜುಲೈನಲ್ಲಿ ಪಣಂಬೂರಿನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್‌ನನ್ನು ಬಂಧಿಸಲಾಗಿದ್ದರೆ, ಕಳೆದ ತಿಂಗಳು  ಮೂಡಬಿದಿರೆಯ ಮಿತಿಯಲ್ಲಿ ನಡೆದ ಡಕಾಯಿತಿ  ಪ್ರಕರಣದಲ್ಲಿ ಜೈನುದ್ದೀನ್ ಮತ್ತು ಅನ್ವರ್ ಬಂಧನವಾಗಿತ್ತು.

ಗಾಯಾಳುಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಜೈಲಿಗೆ ಭೇಟಿ ನೀಡಿ ಮಾರಾಮಾರಿಯಲ್ಲಿ ಭಾಗವಹಿಸಿದ್ದವರನ್ನು ಕರೆದಿಯ್ದಿದ್ದಾರೆ, ಮಾಧ್ಯಮದ ಜತೆ  ಮಾತನಾಡಿದ ಪೊಲೀಸ್ ಆಯುಕ್ತ ಶಶಿ ಕುಮಾರ್, "ಕೊಲೆ ಯತ್ನ ಮತ್ತು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಮೀರ್ ಬೆಳಿಗ್ಗೆ ಅನ್ಸಾರ್ ಮತ್ತು ಜೈನುದ್ದೀನ್ ಮೇಲೆ ಹಲ್ಲೆ ನಡೆಸಿದ್ದಾನೆ. ಜೈಲು ಸಿಬ್ಬಂದಿ ದಾಳಿಯನ್ನು ತಡೆಯಲು ಪ್ರಯತ್ನಿಸಿದಾಗ, ಅವರ ಮೇಲೂ ಹಲ್ಲೆ ನಡೆಸಿದರು, ಇದೀಗ ಅವರುಗಳನ್ನುಪ್ರತ್ಯೇಕ ಬ್ಯಾರಕ್‌ಗೆ ವರ್ಗಾಯಿಸಲಾಗಿದೆ.

"ಘಟನೆಯ ನಂತರ, ನಾನು ಮತ್ತು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದೆ. ಅವರನ್ನು ವಿಚಾರಣೆ ನಡೆಸಿದಾಗ ಅವರು ಪೊಲೀಸ್ ಅಧಿಕಾರಿಗಳ ಮೇಲೆ ವಸ್ತುಗಳನ್ನು ಎಸೆಯುವ ಮೂಲಕ ಗಲಾಟೆ ನಡೆಸಿದ್ದಾಗಿ. ಜೈಲು ಅಧಿಕಾರಿಗಳು ನೀಡಿದ ಮಾಹಿತಿಯಂತೆ ನಾವು ಪ್ರಕರಣವನ್ನು ದಾಖಲಿಸಿದ್ದೇವೆ,  ಜೈಲು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಮೀರ್ ಪೊಲೀಸರ ಮೇಲೆ ಹಲ್ಲೆ ಮಾಡುವ ಚಾಳಿ ಹೊಂದಿದ್ದಾನೆ. ಇಂತಹಾ ಘಟನೆ ನಡೆಸಲು ಆತ ಇತರ ಕೈದಿಗಳನ್ನು ಪ್ರೇರೇಪಿಸುತ್ತಿದ್ದನು "ಎಂದು ಆಯುಕ್ತರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT