ಕೈದಿಗಳ ಮಾರಾಮಾರಿ ನಡೆದ ಮಂಗಳೂರು ಜೈಲು 
ರಾಜ್ಯ

ಮಂಗಳೂರು ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಇಬ್ಬರಿಗೆ ಗಾಯ

ಮಂಗಳೂರು ಜಿಲ್ಲಾ ಉಪ ಕಾರಾಗೃಹದಲ್ಲಿ ಕೈದಿಗಳ  ನಡುವೆ ಮಾರಾಮಾರಿ ನಡೆದಿದ್ದು ಕನಿಷ್ಠ ಇಬ್ಬರಿಗೆ ಗಾಯಗಳಾಗಿದೆ.

ಮಂಗಳೂರು: ಮಂಗಳೂರು ಜಿಲ್ಲಾ ಉಪ ಕಾರಾಗೃಹದಲ್ಲಿ ಕೈದಿಗಳ  ನಡುವೆ ಮಾರಾಮಾರಿ ನಡೆದಿದ್ದು ಕನಿಷ್ಠ ಇಬ್ಬರಿಗೆ ಗಾಯಗಳಾಗಿದೆ.

ಭಾನುವಾರ ಬೆಳಗಿನ ಉಪಹಾರದ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಸಮೀರ್ ಎಂದು ಗುರುತಿಸಲ್ಪಟ್ಟ ದರೋಡೆ-ಆರೋಪಿ ಸಹ ಕೈದಿಯಾಗಿದ್ದ ಅನ್ಸರ್ ಗೆ ಚಮಚ ಮತ್ತು ಇತರ ಅಡುಗೆ ಪಾತ್ರೆಗಳನ್ನು ಬಳಸಿ ಹಲ್ಲೆ ಮಾಡಿದ್ದ. ಆ ಜತೆಗೆ ಜೈನುದ್ದೀನ್ ಎಂದು ಗುರುತಿಸಲ್ಪಟ್ಟ ಕೈದಿಯನ್ನೂ ಗಾಯಗೊಳಿಸಿದ್ದಾನೆ.

ಅನ್ಸರ್ ಕೈ ಮತ್ತು ಕಾಲಿಗೆ ಗಾಯವಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿದೆ.

ಕಳೆದ ಜುಲೈನಲ್ಲಿ ಪಣಂಬೂರಿನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್‌ನನ್ನು ಬಂಧಿಸಲಾಗಿದ್ದರೆ, ಕಳೆದ ತಿಂಗಳು  ಮೂಡಬಿದಿರೆಯ ಮಿತಿಯಲ್ಲಿ ನಡೆದ ಡಕಾಯಿತಿ  ಪ್ರಕರಣದಲ್ಲಿ ಜೈನುದ್ದೀನ್ ಮತ್ತು ಅನ್ವರ್ ಬಂಧನವಾಗಿತ್ತು.

ಗಾಯಾಳುಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಜೈಲಿಗೆ ಭೇಟಿ ನೀಡಿ ಮಾರಾಮಾರಿಯಲ್ಲಿ ಭಾಗವಹಿಸಿದ್ದವರನ್ನು ಕರೆದಿಯ್ದಿದ್ದಾರೆ, ಮಾಧ್ಯಮದ ಜತೆ  ಮಾತನಾಡಿದ ಪೊಲೀಸ್ ಆಯುಕ್ತ ಶಶಿ ಕುಮಾರ್, "ಕೊಲೆ ಯತ್ನ ಮತ್ತು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಮೀರ್ ಬೆಳಿಗ್ಗೆ ಅನ್ಸಾರ್ ಮತ್ತು ಜೈನುದ್ದೀನ್ ಮೇಲೆ ಹಲ್ಲೆ ನಡೆಸಿದ್ದಾನೆ. ಜೈಲು ಸಿಬ್ಬಂದಿ ದಾಳಿಯನ್ನು ತಡೆಯಲು ಪ್ರಯತ್ನಿಸಿದಾಗ, ಅವರ ಮೇಲೂ ಹಲ್ಲೆ ನಡೆಸಿದರು, ಇದೀಗ ಅವರುಗಳನ್ನುಪ್ರತ್ಯೇಕ ಬ್ಯಾರಕ್‌ಗೆ ವರ್ಗಾಯಿಸಲಾಗಿದೆ.

"ಘಟನೆಯ ನಂತರ, ನಾನು ಮತ್ತು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದೆ. ಅವರನ್ನು ವಿಚಾರಣೆ ನಡೆಸಿದಾಗ ಅವರು ಪೊಲೀಸ್ ಅಧಿಕಾರಿಗಳ ಮೇಲೆ ವಸ್ತುಗಳನ್ನು ಎಸೆಯುವ ಮೂಲಕ ಗಲಾಟೆ ನಡೆಸಿದ್ದಾಗಿ. ಜೈಲು ಅಧಿಕಾರಿಗಳು ನೀಡಿದ ಮಾಹಿತಿಯಂತೆ ನಾವು ಪ್ರಕರಣವನ್ನು ದಾಖಲಿಸಿದ್ದೇವೆ,  ಜೈಲು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಮೀರ್ ಪೊಲೀಸರ ಮೇಲೆ ಹಲ್ಲೆ ಮಾಡುವ ಚಾಳಿ ಹೊಂದಿದ್ದಾನೆ. ಇಂತಹಾ ಘಟನೆ ನಡೆಸಲು ಆತ ಇತರ ಕೈದಿಗಳನ್ನು ಪ್ರೇರೇಪಿಸುತ್ತಿದ್ದನು "ಎಂದು ಆಯುಕ್ತರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT