ಭಾಸ್ಕರ್ ರಾವ್ 
ರಾಜ್ಯ

ಅಂತರರಾಜ್ಯ ಗಡಿಯಲ್ಲಿ ಸುಗಮ ಕಾರ್ಯಾಚರಣೆಗಾಗಿ ಕೋವಿಡ್ ನಿಯಮ ರೂಪಿಸಿ: ಭಾಸ್ಕರ್ ರಾವ್

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಂತರರಾಜ್ಯ ಗಡಿ ಭಾಗದಲ್ಲಿ ಸುಗಮ ಕಾರ್ಯಾಚರಣೆಗಾಗಿ ಸೂಕ್ತ ನಿಯಮ ರೂಪಿಸುವಂತೆ ಜಿಲ್ಲಾಡಳಿತಕ್ಕೆ ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಸೂಚಿಸಿದ್ದಾರೆ.

ವಿಜಯಪುರ: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಂತರರಾಜ್ಯ ಗಡಿ ಭಾಗದಲ್ಲಿ ಸುಗಮ ಕಾರ್ಯಾಚರಣೆಗಾಗಿ ಸೂಕ್ತ ನಿಯಮ ರೂಪಿಸುವಂತೆ ಜಿಲ್ಲಾಡಳಿತಕ್ಕೆ ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಸೂಚಿಸಿದ್ದಾರೆ.

ವಿಜಯಪುರ ಮತ್ತು ಬೆಳಗಾವಿಗೆ ಭೇಟಿ ನೀಡಿದ್ದ ಅವರು ಡಿಸಿ ಪಿ ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಗೋವಿಂದ ರೆಡ್ಡಿ, ಮತ್ತು ಎಸ್ ಪಿ ಅನುಪಮ್ ಅಗರ್ ವಾಲ್ ಅವರ ಜೊತೆ ಚರ್ಚೆ ನಡೆಸಿದರು, “ಕರ್ನಾಟಕದ ಗಡಿ ಪ್ರದೇಶಗಳು ಮಹಾರಾಷ್ಟ್ರಕ್ಕಿಂತ ಹೆಚ್ಚು ಅಭಿವೃದ್ಧಿ ಹೊಂದಿವೆ ಎಂದು ರಾವ್ ತಿಳಿಸಿದ್ದಾರೆ.

ಬೇರೆ ರಾಜ್ಯಗಳ ಜನರು ಆರೋಗ್ಯ ಸೇವೆಗಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ, ಈ ವೇಳೆ ಅನಧಿಕೃತ ಪ್ರವೇಶಕ್ಕಾಗಿ ಘರ್ಷಣೆ ನಡೆಯುತ್ತವೆ, ಹೀಗಾಗಿ ಗಡಿ ನಿಯಮಾವಳಿಗಳ ಪಟ್ಟಿಯನ್ನು ಸಿದ್ಧಪಡಿಸಿ ಗಡಿಯ ಎರಡೂ ಬದಿ ಜನರಿಗೆ ವಿತರಿಸಲು ನಾನು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಜನರು ಬರುವುದಕ್ಕೆ ನಮಗೆ ಯಾವುದೇ ಆಕ್ಷೇಪವಿಲ್ಲ, ಆದರೆ ಅವರು ಕೆಲವು ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.

ಹಾಸಿಗೆ ನಿರ್ವಹಣೆ ಮತ್ತು ಆಮ್ಲಜನಕ ಮತ್ತು ರೆಮ್‌ಡೆಸಿವಿರ್ ಪೂರೈಕೆಗಾಗಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ.

ಇದನ್ನು ತಾಲ್ಲೂಕು ಮಟ್ಟಕ್ಕೆ ಕೊಂಡೊಯ್ಯುವಂತೆ ಜಿಲ್ಲಾ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇದು ನಮಗೆ ಪಾರದರ್ಶಕತೆ ಸಾಧಿಸಲು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ತಳಮಟ್ಟದಲ್ಲಿ ಕಾರ್ಯಗತಗೊಳಿಸಲು ಸಹಾಯ ಮಾಡುತ್ತದೆ ಎೆದು ಹೇಳಿದ್ದಾರೆ.

ಕೋವಿಡ್ ಓಡಿಸಲು ಸರ್ಕಾರದ ಜೊತೆ ಜನ ಕೈ ಜೋಡಿಸಬೇಕು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Vladimir Putin ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ: ಡಿ. 4ರಂದು ದೆಹಲಿಯಲ್ಲಿ 23ನೇ ಶೃಂಗಸಭೆ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ಕುಡುಕರಿಗೊಬ್ಬ, ಬ್ಯಾಚುಲರ್‌ಗಳಿಗೆ ಮತ್ತೊಬ್ಬ ದೇವರು: ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ: 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆ

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ಯುವಕರ ದುರ್ಮರಣ

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

SCROLL FOR NEXT