ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ ಆರೋಪ: ನಗರದ ಪ್ರತಿಷ್ಠಿತ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು

ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. 

ಬೆಂಗಳೂರು: ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. 

ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯ ಸಿಇಒ ಡೇವಿಡ್, ಶಸ್ತ್ರಚಿಕಿತ್ಸೆಯ ಮುಖ್ಯಸ್ಥೆ ಕಲ್ಪನಾ, ವೈದ್ಯಕೀಯ ಅಧೀಕ್ಷಕರಾದ ಶಾಂತಾ, ಸಹನಾ, ಆರ್.ಚಂದನಾ ಹಾಗೂ ಮಂಜುಳ ಎಂಬುವವರು ಸೇರಿ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. 

ಈ ನಡುವೆ ಪ್ರಕರಣ ಸಂಬಂಧ ಮೂವರಿಗೆ ನೋಟಿಸ್ ಕೂಡ ಜಾರಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಟೆಯವರು ಹೇಳಿದ್ದಾರೆ. 

ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಅರೋಗ್ಯಾಧಿಕಾರಿ ಡಾ.ನಾಗೇಂದ್ರ ಕುಮಾರ್ ಅವರು ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಬಿಬಿಎಂಪಿ ಕೋಟಾದಡಿ ಅಪೋಲೋ ಆಸ್ಪತ್ರೆಗೆ ಏ.14ರಂದು ಸೂರ್ಯ ಏ.20ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, ಅರೋಪಿಗಳು ಏ.24ರವರೆಗೂ ಸೂರ್ಯ ನಾರಾಯಣ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ಬಿಬಿಎಂಪಿಗೆ ಮಾಹಿತಿ ನೀಡಿ ಇತರೆ ಕೋವಿಡ್ ರೋಗಿಗಳಿಗೆ ಬೇಡ್ ನೀಡದೇ ದುರುಪಯೋಗಪಡಿಸಿಕೊಂಡಿದ್ದಾರೆ. 

ಅಲ್ಲದೆ, ರಾಜಾರಾಂ ಎಂಬ ಬಿಬಿಎಂಪಿ ಕೋಟಾದಡಿಯೇ ಸೋಂಕಿತರೊಬ್ಬರು ಇದೇ ಆಸ್ಪತ್ರೆಗೆ ಏ.16 ದಾಖಲಾಗಿದ್ದು, ಚಿಕಿತ್ಸೆ ಫಲಿಸದೆ ಏ.20ರಂದು ಮೃತಪಟ್ಟಿದ್ದರು. ಮೃತರ ಕುಟುಂಬಸ್ಥರ ಬಳಿ ಆಸ್ಪತ್ರೆ ಆಡಳಿತ ಮಂಡಳಿ ರೂ.2.49 ಲಕ್ಷ ಕಟ್ಟಿಸಿಕೊಂಡಿದ್ದು, ವಂಚನೆ ಮಾಡಿದೆ. 

ಇಷ್ಟು ಸುಮ್ಮನಾಗದ ವಂಚಕರು ವ್ಯಕ್ತಿ ಮೃತಪಟ್ಟು 4 ದಿನ ಬಳಿಕವೂ ಏ.25ರವರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಎಂಬ ಮಾಹಿತಿ ನೀಡಿ ವಂಚನೆ ಮಾಡಿದ್ದಾರೆ. 

ಅದೇ ರೀತಿ ಕಾಶಿನಾಥ್ ಎಂಬ ಕೋವಿಡ್ ರೋಗಿ ಏ.17ರಂದು ಚಿಕಿತ್ಸೆಗೆ ದಾಖಲಾಗಿ ಏ.22 ರಂದು ಡಿಸ್ಚಾರ್ಜ್ ಆಗಿದ್ದರು. ಆದರೂ ಬಿಬಿಎಂಪಿಗೆ ರೋಗಿ ಇನ್ನೂ ಇದ್ದಾರೆಂದು ವರದಿ ನೀಡಿದ್ದಾರೆಂದು ಹೇಳಲಾಗುತ್ತಿದೆ. 

ತಮ್ಮ ವಿರುದ್ಧ ಆರೋಪಗಳು ಕೇಳಿ ಬಂದು, ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿದರೂ ಯಾರೊಬ್ಬರೂ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಂಪರ್ಕಕ್ಕೆ ಸಿಕ್ಕಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT