ಸಂಗ್ರಹ ಚಿತ್ರ 
ರಾಜ್ಯ

ವಿಕಲಚೇತನರಿಗೆ ಲಸಿಕೆ ನೀಡಲು ಯೋಜನೆ ರೂಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ವಿಕಲಚೇತನರಿಗೆ ಲಸಿಕೆ ನೀಡಲು ಕಾರ್ಯವಿಧಾನಗಳು ಅಥವಾ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ಬೆಂಗಳೂರು: ವಿಕಲಚೇತನರಿಗೆ ಲಸಿಕೆ ನೀಡಲು ಕಾರ್ಯವಿಧಾನಗಳು ಅಥವಾ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ನ್ಯಾಯ ಪೀಠವು ಈ ನಿರ್ದೇಶನ ನೀಡಿದೆ.

ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ. ‘ಲಸಿಕೆ ಪಡೆಯಲು ಅಂಗವಿಕಲರು ಪಾಳಿಗಳಲ್ಲಿ ನಿಲ್ಲುವಂತೆ ಆಗಬಾರದು. ಮನೆಗಳಿಂದ ಹೊರಗೆ ಬರಲು ಕಷ್ಟಪಡುವವರಿಗೆ ಅಂಥವರ ಮನೆಗಳಲ್ಲಿಯೇ ಲಸಿಕೆ ಸಿಗುವಂತೆ ಸರ್ಕಾರ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದೆ. 

‘ಅಂಗವಿಕಲರ ಹಕ್ಕುಗಳ ಕಾಯ್ದೆ’ಯ 25 (1) (ಸಿ) ಪರಿಚ್ಛೇದದ ಪ್ರಕಾರ ಸರ್ಕಾರ ಮತ್ತು ಸ್ಥಳೀಯ ಪ್ರಾಧಿಕಾರಿಗಳು ಅಂಗವಿಕಲರಿಗೆ ಆದ್ಯತೆ ನೀಡುವುದು ಕಡ್ಡಾಯವಾಗಿದೆ. ಚಿಕಿತ್ಸೆಯ ವಿಚಾರದಲ್ಲಿಯೂ ಅವರಿಗೆ ಆದ್ಯತೆ ಸಿಗಬೇಕು. ಲಸಿಕೆ ನೀಡುವ ವಿಚಾರದಲ್ಲಿಯೂ ಇದು ಅನ್ವಯವಾಗಬೇಕು. ಲಸಿಗೆ ನೀಡುವಿಕೆಯಲ್ಲಿಯೂ ಯೋಜನೆ ರೂಪಿಸಬೇಕು. 

ವಿಕಲಚೇತನರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗೆ ಅರ್ಜಿ ಸಲ್ಲಿಸುವ ಮೂಲಕ ಲಸಿಕೆಗೆ ವಿನಂತಿಸಬಹುದು. ಎಸ್​ಎಂಎಸ್, ಇ-ಮೇಲ್, ವಾಟ್ಸಾಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ಮನೆಯಿಂದ ಹೊರಬರಲಾರದವರಿಗೆ ಮನೆಯಲ್ಲೇ ಲಸಿಕೆ ನೀಡಲು ಅವಕಾಶ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ. ಅಲ್ಲದೆ, ಇದರ ಮುಂದಿನ ವಿಚಾರಣೆಯನ್ನು ಮೇ 12ಕ್ಕೆ ನಿಗದಪಡಿಸಿದ್ದು, ಈ ನಡುವೆ ತನ್ನ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT