ಸಂಗ್ರಹ ಚಿತ್ರ 
ರಾಜ್ಯ

ವಿಕಲಚೇತನರಿಗೆ ಲಸಿಕೆ ನೀಡಲು ಯೋಜನೆ ರೂಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ವಿಕಲಚೇತನರಿಗೆ ಲಸಿಕೆ ನೀಡಲು ಕಾರ್ಯವಿಧಾನಗಳು ಅಥವಾ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ಬೆಂಗಳೂರು: ವಿಕಲಚೇತನರಿಗೆ ಲಸಿಕೆ ನೀಡಲು ಕಾರ್ಯವಿಧಾನಗಳು ಅಥವಾ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ನ್ಯಾಯ ಪೀಠವು ಈ ನಿರ್ದೇಶನ ನೀಡಿದೆ.

ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ. ‘ಲಸಿಕೆ ಪಡೆಯಲು ಅಂಗವಿಕಲರು ಪಾಳಿಗಳಲ್ಲಿ ನಿಲ್ಲುವಂತೆ ಆಗಬಾರದು. ಮನೆಗಳಿಂದ ಹೊರಗೆ ಬರಲು ಕಷ್ಟಪಡುವವರಿಗೆ ಅಂಥವರ ಮನೆಗಳಲ್ಲಿಯೇ ಲಸಿಕೆ ಸಿಗುವಂತೆ ಸರ್ಕಾರ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದೆ. 

‘ಅಂಗವಿಕಲರ ಹಕ್ಕುಗಳ ಕಾಯ್ದೆ’ಯ 25 (1) (ಸಿ) ಪರಿಚ್ಛೇದದ ಪ್ರಕಾರ ಸರ್ಕಾರ ಮತ್ತು ಸ್ಥಳೀಯ ಪ್ರಾಧಿಕಾರಿಗಳು ಅಂಗವಿಕಲರಿಗೆ ಆದ್ಯತೆ ನೀಡುವುದು ಕಡ್ಡಾಯವಾಗಿದೆ. ಚಿಕಿತ್ಸೆಯ ವಿಚಾರದಲ್ಲಿಯೂ ಅವರಿಗೆ ಆದ್ಯತೆ ಸಿಗಬೇಕು. ಲಸಿಕೆ ನೀಡುವ ವಿಚಾರದಲ್ಲಿಯೂ ಇದು ಅನ್ವಯವಾಗಬೇಕು. ಲಸಿಗೆ ನೀಡುವಿಕೆಯಲ್ಲಿಯೂ ಯೋಜನೆ ರೂಪಿಸಬೇಕು. 

ವಿಕಲಚೇತನರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗೆ ಅರ್ಜಿ ಸಲ್ಲಿಸುವ ಮೂಲಕ ಲಸಿಕೆಗೆ ವಿನಂತಿಸಬಹುದು. ಎಸ್​ಎಂಎಸ್, ಇ-ಮೇಲ್, ವಾಟ್ಸಾಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ಮನೆಯಿಂದ ಹೊರಬರಲಾರದವರಿಗೆ ಮನೆಯಲ್ಲೇ ಲಸಿಕೆ ನೀಡಲು ಅವಕಾಶ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ. ಅಲ್ಲದೆ, ಇದರ ಮುಂದಿನ ವಿಚಾರಣೆಯನ್ನು ಮೇ 12ಕ್ಕೆ ನಿಗದಪಡಿಸಿದ್ದು, ಈ ನಡುವೆ ತನ್ನ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT